Wednesday, April 30, 2025
Google search engine
Homeಶಿವಮೊಗ್ಗಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ...

ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ನೇತೃತ್ವದ ತಂಡ..!

ಶಿವಮೊಗ್ಗ: ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಮತ್ತು ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದೊಂದಿಗೆ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಜಾಥಾವನ್ನು ಹಮ್ಮಿಕೊಂಡಿದ್ದು, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ.ಕೆ, ರವರು ಬೈಕ್ ಜಾಥಾದಲ್ಲಿ ಪಾಲ್ಗೊಂಡು, ಜಾಥಾಕ್ಕೆ ಚಾಲನೆ ನೀಡಿದರು.

ಬೈಕ್ ಜಾಥಾವನ್ನು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಮೈದಾನದಿಂದ ಪ್ರಾರಂಭಿಸಿ ಐಬಿ ವೃತ್ತದ ಮೂಲಕ ಆಲ್ಕೊಳ ವೃತ್ತ, ವಿನೋಬನಗರ ಚೌಕಿ, ಉಷಾ ನರ್ಸಿಂಗ್ ಹೋಂ ವೃತ್ತ, ಮಹಾವೀರ ವೃತ್ತ, ಕರ್ನಾಟಕ ಸಂಘ, ಹೊಳೆ ಬಸ್ ಸ್ಟಾಪ್, ಎಂ.ಆರ್.ಎಸ್ ವೃತ್ತ, ನ್ಯೂ ಮಂಡ್ಲಿ, ಗೋಪಾಳ, ಆಲ್ಕೊಳ ವೃತ್ತ, ಐಬಿ ವೃತ್ತ, ಕುವೆಂಪು ರಸ್ತೆ, ಜುಯಲ್ ರಾಕ್ ಹೋಟೆಲ್ ರಸ್ತೆ, ಗೋಪಿ ವೃತ್ತ, ಅಮೀರ್ ಅಹಮ್ಮದ್ ವೃತ್ತದಿಂದ ಅಶೋಕ ವೃತ್ತದ ಮೂಲಕ ಡಿಎಆರ್ ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.

ಬೈಕ್ ಜಾಥಾದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಬಾಲರಾಜ್, ಡಿ.ವೈ.ಎಸ್.ಪಿ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ, ಪ್ರಭು ಡಿ.ಟಿ, ಡಿ.ವೈ.ಎಸ್.ಪಿ ಪೊಲೀಸ್ ಉಪಾಧೀಕ್ಷಕರು ಡಿಸಿಆರ್.ಬಿ ಶಿವಮೊಗ್ಗ, ಸುರೇಶ್ ಎಂ ಡಿ.ವೈ.ಎಸ್.ಪಿ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಬಿ ಉಪ ವಿಭಾಗ, ಪ್ರಶಾಂತ್, ಆರ್.ಪಿ.ಐ ಡಿಎಆರ್ ಶಿವಮೊಗ್ಗ, ಸಂತೋಷ್ ಕುಮಾರ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ಬೈಕ್ ಕ್ಲಬ್ ಗಳ ಬೈಕ್ ಸವಾರರು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...