Wednesday, April 30, 2025
Google search engine
Homeರಾಜ್ಯತಹಶೀಲ್ದಾರ್ ನಾಗರಾಜ್ ಚಿತ್ತ ಹೈಕೋರ್ಟ್ ನತ್ತ...!

ತಹಶೀಲ್ದಾರ್ ನಾಗರಾಜ್ ಚಿತ್ತ ಹೈಕೋರ್ಟ್ ನತ್ತ…!

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನ ತಹಶೀಲ್ದಾರ್ ಎನ್.ಜೆ ನಾಗರಾಜ್  ವಿರುದ್ಧ ನಡೆದ  ಲೋಕಾಯುಕ್ತ ರೇಡ್ ನಲ್ಲಿ ಅಕ್ರಮ ಆಸ್ತಿ ಸಂಪಾದನೆ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಲೋಕಾಯುಕ್ತ ವರದಿ ಆಧಾರದ ಶಿವಮೊಗ್ಗ ತಾಲೂಕಿನ ತಹಶಿಲ್ದಾರ್ ಎನ್.ಜೆ ನಾಗರಾಜ್ ರವರನ್ನು ಅಮಾನತ್ತು ಪಡಿಸಿದೆ.


ಪ್ರಕರಣದ ಹಿನ್ನಲೆ


ಎನ್ ಜೆ ನಾಗರಾಜ್ ಈಹಿಂದೆ ತಹಶೀಲ್ದಾರ್ ಗ್ರೇಡ್- 1ಆಗಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಆ ಸಮಯದಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆಯಾಗಿದೆ ಎಂಬ ಮಾಹಿತಿ ಆಧಾರ ಮೇರೆಗೆ ಇವರ ವಿರುದ್ಧ ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

ದಿನಾಂಕ 23-4-2023 ಘನ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ದಾವಣಗೆರೆ ಇವರಿಂದ ಅಗತ್ಯವಾದ ಶೋಧನಾ ವಾರೆಂಟ್ ಪಡೆದು ದಿನಾಂಕ 24-4-2023ರಂದು ಶಿಕಾರಿಪುರದ ಚನ್ನಕೇಶವ ನಗರದಲ್ಲಿರುವ  ನಾಗರಾಜ್ ರವರು ವಾಸವಿರುವ ಮನೆ ಆಗ ಕಾರ್ಯನಿರ್ವಹಿಸುತ್ತಿದ್ದ ಚಿತ್ರದುರ್ಗದ ಕಛೇರಿ ಹಾಗು ಅವರಿಗೆ ವಾಸ ಮಾಡಲು ನೀಡಿದ್ದ ವಸತಿ ಗೃಹದ ಮೇಲೆ ದಾಳಿ ನಡೆಸಿ ಚರ ಸ್ಥಿರಾಸ್ಥಿ ಸ್ವತ್ತು ಗಳು ಅಗತ್ಯಕ್ಕಿಂತ ಅಧಿಕ ಆಸ್ತಿಗಳಿಕೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು  ಮೇಲ್ನೋಟಕ್ಕೆ ಸಾಭೀತು ಆಗಿರುವುದರಿಂದ ಆಪಾಧಿತರನ್ನು ಹಸ್ತಕ್ಷೇಪ ಸಾಕ್ಷಿ ನಾಶ ಮಾಡಬಹುದು ಎನ್ನುವ ಕಾರಣಕ್ಕಾಗಿ ಇವರನ್ನು ಸದರಿ ಸೇವೆಯಿಂದ ಅಮಾನತ್ತು ಗೊಳಿಸಿ ಆದೇಶ ನೀಡಲಾಗಿದೆ.


ಸದ್ಯ ಈಗ ಎನ್.ಜೆ ನಾಗರಾಜ್ ರವರು ಸರ್ಕಾರದ ಆದೇಶವನ್ನು ತಡೆಹಿಡಿಯಲು ಹೈಕೋರ್ಟ್ ಮೆಟ್ಟಿಲು ಏರಲಿದ್ದಾರೆ‌. ಹೈಕೋರ್ಟ್ ನಿಂದ  ಯಾವ ಆದೇಶ ಬರಲಿದೆ ಎಂದು ಕಾದು ನೋಡಬೇಕಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...