Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗ:ಜೈಲು ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದ ಡಾ.ಆನಂದ್ ಕುಮಾರ್ ತ್ರಿಪಾಠಿ ಹಾಗೂ...

ಶಿವಮೊಗ್ಗ:ಜೈಲು ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದ ಡಾ.ಆನಂದ್ ಕುಮಾರ್ ತ್ರಿಪಾಠಿ ಹಾಗೂ ರಮಾನಂದ್ ಗಾರ್ಗಿ..!



ಶಿವಮೊಗ್ಗ:ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ಡಾ.ಆನಂದ್ ಕುಮಾರ್ ತ್ರಿಪಾಠಿ ಮತ್ತು ಹೊಸದಾಗಿ ನೇಮಕಗೊಂಡಿರುವ ಕ್ಯಾಂಪಸ್ ನಿರ್ದೇಶಕ ರಮಾನಂದ್ ಗಾರ್ಗಿ, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಬುಧವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದರು.


ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಆರ್ ಸ್ವಾಗತಿಸಿ, 2023 ರ ಮಾರ್ಚ್‍ನಲ್ಲಿ ಸ್ಥಾಪನೆಗೊಂಡಿರುವ ಆರ್‍ಆರ್‍ಯು(ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ)ದ ದೃಷ್ಟಿಕೋನ ಮತ್ತು ಧ್ಯೇಯದ ಕುರಿತು ಸಿಬ್ಬಂದಿಗಳಿಗೆ ಪರಿಚಯಿಸಿದರು. ಇದೊಂದು ಹೆಮ್ಮೆಯ ಸಂಸ್ಥೆಯಾಗಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡುತ್ತದೆ ಎಂದರು.


ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುವುದು ಒತ್ತಡಭರಿತ ಕೆಲಸವಾಗಿದ್ದು ಇದನ್ನು ನಿರ್ವಹಿಸಲು ವೈಜ್ಞಾನಿಕ ಸಾಧನಗಳ ಅವಶ್ಯಕತೆ ಇರುತ್ತದೆ. ಆರ್‍ಆರ್‍ಯು ಈ ನಿಟ್ಟಿನಲ್ಲಿ ಒತ್ತಡ ನಿರ್ವಹಣೆ ಕುರಿತು ಸಿಬ್ಬಂದಿಗಳಿಗೆ ತರಬೇತಿ ನೀಡಲಿದೆ ಎಂದ ಅವರು ಆರ್‍ಆರ್‍ಯು ಗೆ ಉತ್ತಮ ಯಶಸ್ಸು ಲಭಿಸಲಿ ಹಾಗೂ ತಮ್ಮ ಕಡೆಯಿಂದ ಎಲ್ಲ ರೀತಿಯ ಸಮನ್ವಯ ಮತ್ತು ಬೆಂಬಲವನ್ನು ನೀಡುವುದಾಗಿ ತಿಳಿಸಿದರು.


ಕ್ಯಾಂಪಸ್ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಮಾತನಾಡಿ, ನ್ಯಾಯದಾನದಲ್ಲಿ ಕಾರಾಗೃಹದ ಪಾತ್ರ ಅತ್ಯಗತ್ಯವಾಗಿದೆ ಎಂದ ಅವರು ಕಾರಾಗೃಹ ಮತ್ತು ಸಿಬ್ಬಂದಿಗಳ ಮಹತ್ವವನ್ನು ತಿಳಿಸಿದರು.
ಕ್ಯಾಂಪಸ್ ನಿರ್ದೇಶಕ ರಮಾನಂದ ಗಾರ್ಗಿ ಮಾತನಾಡಿ, ಒತ್ತಡ ನಿರ್ವಹಣೆ ಸುಲಭದ ಕೆಲಸವಲ್ಲ. ಆದರೆ ಶಾಂತಿಯುತ ಜೀವನ ನಡೆಸಲು ನಾವು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕೆಂದರು.


ಈ ತರಬೇತಿ ಕಾರ್ಯಕ್ರಮದಲ್ಲಿ ಆರ್‍ಆರ್‍ಯು ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಡಾ.ನಂದಕುಮಾರ್ ಪೂಜಂ ಮಾತನಾಡಿ, ಒತ್ತಡ ಮತ್ತು ಅದು ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ದುಷ್ಪರಿಣಾಮದ ಕುರಿತು ವಿವರಣೆ ನೀಡಿದ ಅವರು ಒತ್ತಡ ನಿರ್ವಹಿಸುವ ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಸಿಬ್ಬಂದಿಗಳನ್ನು ತೊಡಗಿಸಿದರು.

ಸುದ್ದಿ ಕೃಪೆ: ವಾರ್ತಾ ಇಲಾಖೆ ಶಿವಮೊಗ್ಗ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...