Wednesday, April 30, 2025
Google search engine
Homeರಾಜ್ಯSmart City shivamogga: ಸ್ಮಾರ್ಟ್ ಸಿಟಿಯವರು ನಕಲಿ ಬಿಲ್ ಸೃಷ್ಟಿಸಿ ಬಸ್ಟ್ಯಾಂಡ್ ನಿರ್ಮಾಣ ಮಾಡಿದ್ರಾ..?...

Smart City shivamogga: ಸ್ಮಾರ್ಟ್ ಸಿಟಿಯವರು ನಕಲಿ ಬಿಲ್ ಸೃಷ್ಟಿಸಿ ಬಸ್ಟ್ಯಾಂಡ್ ನಿರ್ಮಾಣ ಮಾಡಿದ್ರಾ..? ಏನಿದು ಬಂಗಾರಪ್ಪ ಅಭಿಮಾನಿಗಳ ಆಕ್ರೋಶ..!

ಶಿವಮೊಗ್ಗ: ಸ್ಮಾರ್ಟ್ ಸಿಟಿ ದಿನದಿಂದ ದಿನಕ್ಕೆ ಒಂದಿಲ್ಲೊಂದು ಸುದ್ದಿಯಿಂದ ಹೆಸರುವಾಸಿಯಾಗಿದೆ. ಈಗ ಅದಕ್ಕೆ ಮತ್ತೊಂದು ಹೊಸ ಸೇರ್ಪಡೆ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ಗೋಪಾಲಗೌಡ ಬಡಾವಣೆಯಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಲು ಅಭಿಮಾನಿ ಒಬ್ಬರಿಗೆ ತಮ್ಮ ಒಡೆತನದ ಶರಾವತಿ ಡೆಂಟಲ್ ಕಾಲೇಜ್ ನಿವೇಶನದಲ್ಲಿ ಅನುಮತಿ ನೀಡಿದ್ದು ಅವರ ಅಭಿಮಾನಿ ಗುತ್ತಿಗೆದಾರಾದ ಈಶ್ವರ ರೆಡ್ಡಿ ಎಂಬುವರು ತಮ್ಮ ಸ್ವಂತ ಖರ್ಚಿನಲ್ಲಿ ಸುಸಜ್ಜಿತ ಬಸ್ ನಿಲ್ದಾಣವನ್ನು “ಎಸ್ ಬಂಗಾರಪ್ಪ ಸಾರ್ವಜನಿಕ ಬಸ್ ನಿಲ್ದಾಣ” ಎಂದು 1996- 97 ರಲ್ಲಿ ನಿರ್ಮಿಸಿದ್ದರು.

ಆದರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನವರು ಅದನ್ನು “ಗೋಪಾಲಗೌಡ ಬಡಾವಣೆ ಬಸ್ ನಿಲ್ದಾಣ” ಎಂದು ಮರು ನಾಮಕರಣ ಮಾಡಿ ನಕಲಿ ಬಿಲ್ಲು ಸೃಷ್ಟಿಸಿ ಬಾರಿ ಅವ್ಯವಹಾರ ಮಾಡಿರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ ಹಾಗೂ ಬಂಗಾರಪ್ಪ ಅವರ ಅಭಿಮಾನಕ್ಕಾಗಿ ಅವರ ಹೆಸರಿನಲ್ಲಿ ಬಸ್ ನಿಲ್ದಾಣ ಮಾಡಿರುವುದನ್ನು ತೆಗೆದು ಹಾಕಿರುವುದು ಅವರ ಅಭಿಮಾನಿಗಳಲ್ಲಿ ತೀವ್ರ ಆಕ್ರೋಶವನ್ನುಂಟುಮಾಡಿದೆ ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಸಂಬಂಧಪಟ್ಟವರಿಗೆ ಶಿಕ್ಷೆ ಆಗಬೇಕು ಮತ್ತೆ ಬಂಗಾರಪ್ಪ ಹೆಸರಿನಲ್ಲಿ ಮರುನಾಮಕರಣ ಆಗಬೇಕು ಎಂದು ದಿವಂಗತ ಬಂಗಾರಪ್ಪ ಅಭಿಮಾನಿಗಳ ಬಳಗ ಹಾಗೂ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿಡಿ ಮಂಜುನಾಥ್ ಅವರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ರಘುರಾಜ್ ಹೆಚ್.ಕೆ.944955305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...