Wednesday, April 30, 2025
Google search engine
Homeಶಿವಮೊಗ್ಗBig news:ಶಿವಮೊಗ್ಗ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಗೆ ದಿನಾಂಕ ಫಿಕ್ಸ್..! ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ...

Big news:ಶಿವಮೊಗ್ಗ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಗೆ ದಿನಾಂಕ ಫಿಕ್ಸ್..! ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ್ ಗೌಡರ ಆಯ್ಕೆ ಬಹುತೇಕ ಖಚಿತ..!

ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರ ಕೇಂದ್ರ) ನ ಚುನಾವಣೆ ದಿನಾಂಕ ನಿಗದಿಯಾಗಿದ್ದು ಇದೇ ತಿಂಗಳ 29ರಂದು ಚುನಾವಣೆ ನಡೆಯಲಿದ್ದು ಯಾರಾಗುತ್ತಾರೆ ಅಧ್ಯಕ್ಷರು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

ಅಪೇಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಮತ್ತೆ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

ಚುನಾವಣೆಗೆ ಬರುವ ಮುನ್ನವೇ ಸಾಕಷ್ಟು ಬೆಳವಣಿಗೆ ನಡೆದಿದ್ದು ಹಾಲಿ ಅಧ್ಯಕ್ಷರಾಗಿದ್ದ ಶಿಕಾರಿಪುರದ ಚನ್ನವೀರಪ್ಪ ಅವರನ್ನು ಅವಿಶ್ವಾಸ ಮಂಡನೆ ಮಂಡಿಸುವುದರ ಮೂಲಕ ಕೆಳಗಿಳಿಸಿದ್ದು ಅವರ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಷಡಾಕ್ಷರಿ ಅವರು ಅಧ್ಯಕ್ಷರಾಗಿ ಮುಂದುವರೆದಿದ್ದರೂ ನಂತರದ ಬೆಳವಣಿಗೆಯಲ್ಲಿ ಆರ್ ಎಂ ಮಂಜುನಾಥ್ ಗೌಡರನ್ನು ಮತ್ತೆ ಅಧ್ಯಕ್ಷ ಸ್ಥಾನಕ್ಕೆ ತರುವ ದೃಷ್ಟಿಯಿಂದ ಉಳಿದ ನಿರ್ದೇಶಕರುಗಳು ಪೂರ್ವ ನಿಯೋಜಿತ ಪ್ಲಾನ್ ಮಾಡಿಕೊಂಡು ಹಾಲಿ ನಿರ್ದೇಶಕರಾಗಿದ್ದ ದುಗ್ಗಪ್ ಗೌಡ ಅವರನ್ನ ರಾಜೀನಾಮೆ ಕೊಡಿಸಿ ತೆರವಾಗಿದ್ದ ನಿರ್ದೇಶಕರ ಸ್ಥಾನಕ್ಕೆ ಆರ್ ಎಂ ಮಂಜುನಾಥ್ ಗೌಡರು ಮತ್ತೆ ನಿರ್ದೇಶಕರಾಗಿ ಆಯ್ಕೆಯಾಗುವಂತೆ ನೋಡಿಕೊಂಡರು.

ನಿರ್ದೇಶಕರಾಗಿದ್ದ ದುಗ್ಗಪ್ ಗೌಡರು ಅಪೇಕ್ಷ ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ನ ಪ್ರತಿನಿಧಿಯಾಗಿ ಆಯ್ಕೆಯಾದರು.

ಇದರ ನಡುವೆ ಆಡಳಿತ ಮಂಡಳಿಯ ಅವಧಿಯು ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು ಈ ಬೆಳವಣಿಗೆಯಲ್ಲಿ ಆರ್.ಎಂ ಮಂಜುನಾಥ್ ಗೌಡರು ಅಧ್ಯಕ್ಷರಾದರೇ ಸಹಕಾರಿ ಕ್ಷೇತ್ರಕ್ಕೆ ಬಲಬಂದಂತೆ ಆಗುತ್ತದೆ ಎನ್ನುವುದು ಅವರ ಒಡನಾಡಿಗಳ ಹಾಗೂ ಈಗಾಗಲೇ ಇರುವ ನಿರ್ದೇಶಕರಗಳ ಅಭಿಪ್ರಾಯ.

ಒಟ್ಟಿನಲ್ಲಿ ಸಹಕಾರಿ ಕ್ಷೇತ್ರದ ದಿಗ್ಗಜ ಆರ್ ಎಂ ಮಂಜುನಾಥ್ ಗೌಡರು ಅಧ್ಯಕ್ಷರಾದರೆ ಮತ್ತೆ ಸಹಕಾರಿ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡುವುದು ಸಹಜ ಎನ್ನುವುದು ಹಲವು ಸಹಕಾರಿ ಕ್ಷೇತ್ರಗಳ ದೂರಿಣರ ಒಮ್ಮತದ ಅಭಿಪ್ರಾಯ..

ರಘುರಾಜ್ ಹೆಚ್‌. ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...