Wednesday, April 30, 2025
Google search engine
Homeಶಿವಮೊಗ್ಗಶಾಂತಿನಗರದಲ್ಲಿ ಹೊರಗಿನಿಂದ ಬಂದವರಿಂದ ಶಾಂತಿ ಕದಡುವ ಯತ್ನ ಶಾಸಕ ಚನ್ನಬಸಪ್ಪ..! ಪರಿಸ್ಥಿತಿ ತಿಳಿಯಾಗಿದೆ ಭಯಪಡುವ ಅಗತ್ಯತೆ...

ಶಾಂತಿನಗರದಲ್ಲಿ ಹೊರಗಿನಿಂದ ಬಂದವರಿಂದ ಶಾಂತಿ ಕದಡುವ ಯತ್ನ ಶಾಸಕ ಚನ್ನಬಸಪ್ಪ..! ಪರಿಸ್ಥಿತಿ ತಿಳಿಯಾಗಿದೆ ಭಯಪಡುವ ಅಗತ್ಯತೆ ಇಲ್ಲ ಎಸ್‌ಪಿ ಸ್ಪಷ್ಟನೆ..!

ಶಿವಮೊಗ್ಗ: ನಗರದ ಶಾಂತಿನಗರ ರಾಗಿಗುಡ್ಡ ಭಾಗದಲ್ಲಿ ಇಂದು ಬೆಳಗ್ಗಿನಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ವಾತಾವರಣ ನಂತರ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ ನಂತರ ವಾತಾವರಣವನ್ನು ತಿಳಿಗೊಳಿಸಿದ್ದರು.

ಆದರೆ ಸಂಜೆ ಮೆರವಣಿಗೆಯ ವೇಳೆಯಲ್ಲಿ ಕಲ್ಲುತುರಾಟ ನಡೆದು ಅನ್ಯ ಕೋಮಿನ ಕೆಲವರ ನಡುವೆ ಪರಸ್ಪರ ವಾಗ್ವಾದ ನಡೆದು ಒಂದಷ್ಟು ಜನಕ್ಕೆ ಗಾಯಗಳಾಗಿವೆ ಅದರಲ್ಲಿ ಪೊಲೀಸರು ಸಹ ಸೇರಿದ್ದಾರೆ.

ಕೂಡಲೇ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಲ್ಪಿಸಿತು.ನಂತರ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಎಸ್ ಪಿ ಮಿಥುನ್ ಕುಮಾರ್ ಅವರು ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈಗಾಗಲೇ ಸ್ಥಳದಲ್ಲಿ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿಗೊಳಿಸಿದ್ದು ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಈಗಾಗಲೇ ಈ ಘಟನೆಗೆ ಸಂಬಂಧಪಟ್ಟಂತೆ ಕೆಲವೊಂದು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ನಾಲ್ಕರಿಂದ ಐದು ಜನಕ್ಕೆ ಗಾಯಗಳಾಗಿವೆ ಉಳಿದಂತೆ ಯಾವುದೇ ರೀತಿಯ ಗಲಾಟೆಗಳು ನಡೆದಿಲ್ಲ ದಯವಿಟ್ಟು ಯಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಸ್ಥಳಕ್ಕೆ ಶಾಸಕರ ಭೇಟಿ ..!

ಸ್ಥಳಕ್ಕೆ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದು ಎರಡು ಹಬ್ಬಗಳು ಶಾಂತ ರೀತಿಯಿಂದ ನಡೆದಿವೆ ಆದರೆ ರಾಗಿ ಗುಡ್ಡದಲ್ಲಿ ಕಳೆದ ಮೂರು ವರ್ಷಗಳಿಂದ ಇದೇ ತರದ ವಾತಾವರಣ ನಿರ್ಮಾಣವಾಗುತ್ತಿದೆ. ಕಟೌಟ್ ವಿಚಾರಕ್ಕೆ ಈ ಗಲಾಟೆ ನಡೆದಿದೆ ಆದರೆ ಹೊರಗಿನಿಂದ ಬಂದವರಿಂದ ಈ ವಾತಾವರಣ ಸೃಷ್ಟಿಯಾಗಿದೆ ಅವರನ್ನು ಬಿಡಬಾರದು ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಸದ್ಯ ಪರಿಸ್ಥಿತಿ ತಿಳಿಯಾಗಿದೆ ಯಾರು ಭಯಪಡುವ ಅಗತ್ಯತೆ ಇಲ್ಲ ಎಂದು ತಿಳಿಸಿದರು.

ರಘುರಾಜ್ ಹೆಚ್‌. ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...