Tuesday, April 29, 2025
Google search engine
Homeಸಿನಿಮಾಮೀನು ಬೇಟೆಗೆ ಹೊರಟ ನಾಯಕ ಗೌರಿಶಂಕರ್: ಕುತೂಹಲ ಹೆಚ್ಚಿಸಿದ ''ಕೆರೆಬೇಟೆ'' ಮೋಷನ್ ಪೋಸ್ಟರ್..!

ಮೀನು ಬೇಟೆಗೆ ಹೊರಟ ನಾಯಕ ಗೌರಿಶಂಕರ್: ಕುತೂಹಲ ಹೆಚ್ಚಿಸಿದ ”ಕೆರೆಬೇಟೆ” ಮೋಷನ್ ಪೋಸ್ಟರ್..!

ಕೂಣಿ ಹಿಡಿದು ಮೀನು ಬೇಟೆಗೆ ಹೊರಟ ನಾಯಕ ಗೌರಿಶಂಕರ್

‘ಕೆರೆಬೇಟೆ’ಗೆ ಸಜ್ಜಾದ ನಾಯಕ ಗೌರಿಶಂಕರ್ ಮತ್ತು ತಂಡ

‘ಕೆರೆಬೇಟೆ’ ಟೈಟಲ್ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಬಾರಿ ಕುತೂಹಲ ಮೂಡಿಸಿರುವ ಸಿನಿಮಾ. ಈಗಾಗಲೇ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ ಸಿನಿಮಾತಂಡ ಇದೀಗ ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಕೆರೆಬೇಟೆ’ ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮೊದಲ ಬಾರಿಗೆ ಮೀನು ಬೇಟೆಯನ್ನು ತೆರೆಮೇಲೆ ತರುತ್ತಿದ್ದಾರೆ ನಿರ್ದೇಶಕ ರಾಜ್‌ಗುರು. ನಾಯಕನಾಗಿ ಗೌರಿಶಂಕರ್ ಎಸ್‌ಆರ್‌ಜಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಎರಡು ಸಿನಿಮಾಗಳನ್ನು ಮಾಡಿರುವ ಗೌರಿಶಂಕರ್ ಇದೀಗ ವಿಭಿನ್ನವಾದ ಒಂದೊಳ್ಳೆ ಹಳ್ಳಿ ಸೊಗಡಿನ ಸಿನಿಮಾ ಮೂಲಕ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ.

ಸದ್ಯ ರಿಲೀಸ್ ಆಗಿರುವ ಮೋಷನ್ ಪೋಸ್ಟರ್‌ನಲ್ಲಿ ನಾಯಕ ಗೌರಿಶಂಕರ್ ಕೂಣಿ ಹಿಡಿದು ಕೆರೆಯಲ್ಲಿ ಮೀನು ಬೇಟೆಯಾಡುತ್ತಿದ್ದಾರೆ. ಉದ್ದ ಕೂದಲು ಹಾಗೂ ದಾಡಿ ಬಿಟ್ಟುಕೊಂಡು ರಾ ಲುಕ್‌ನಲ್ಲಿ ನಾಯಕ ಕಾಣಿಸಿಕೊಂಡಿದ್ದು ಅವರ ಹಿಂದೆ ದೊಡ್ಡದೊಂದು ಗುಂಪೇ ಇದೆ. ಮೊದಲ ಬಾರಿಗೆ ಮೀನುಬೇಟೆಯನ್ನು ತೆರೆಮೇಲೆ ತರುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ ರಾಜ್‌ಗುರು ಮತ್ತು ತಂಡ.

ಅಂದಹಾಗೆ ನಿರ್ದೇಶಕ ರಾಜ್‌ಗುರು ಅವರಿಗೆ ಇದು ಚೊಚ್ಚಲ ಸಿನಿಮಾ. ಈ ಮೊದಲು ನಿರ್ದೇಶಕ ಪವನ್ ಒಡೆಯರ್ ಜೊತೆ ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ಜೆಸ್ಸಿ, ರೆಮೋ ಹಾಗೂ ಇನ್ನು ಅನೇಕ ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಹೊಂದ್ದು ಇದೀಗ ಕೆರೆಬೇಟೆ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ ರಾಜ್‌ಗುರು. ಮಲೆನಾಡಿನವರೇ ಆದ ರಾಜ್‌ಗುರು ಚಿಕ್ಕವಯಸ್ಸಿನಿಂದ ಕೆರೆಬೇಟೆ ನೋಡುತ್ತಾ, ಆಡುತ್ತಾ ಬೆಳೆದವರು. ಅದನ್ನೇ ಇಟ್ಟುಕೊಂಡು ಈಗ ಸಿನಿಮಾ ಮಾಡಿರುವುದು ವಿಶೇಷ. ಮಲೆನಾಡಿನ ಜೀವನ ಶೈಲಿಯನ್ನು ಅಷ್ಟೆ ನೈಜ್ಯವಾಗಿ ಕಟ್ಟಿಕೊಡುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಲಾಗಿದೆ.

ಈ ಸಿನಿಮಾದಲ್ಲಿ ಗೌರಿಶಂಕರ್ ಅವರಿಗೆ ನಾಯಕಿಯಾಗಿ ಬಿಂದು ಶಿವರಾಜ್ ನಟಿಸಿದ್ದಾರೆ. ಬಿಂದು ಅವರಿಗೆ ಇದು ಮೊದಲ ಸಿನಿಮಾ. ಇನ್ನೂ ಉಳಿದಂತೆ ಸಿನಿಮಾದಲ್ಲಿ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾಗೆ ನಾಯಕ ಗೌರಿಶಕಂಕರ್ ಅವರ ಜನಮನ ಸಿನಿಮಾಸ್ ಬ್ಯಾನರ್‌ನಲ್ಲಿ ಅವರ ಸಹೋದರ ಜೈಶಂಕರ್ ಪಟೇಲ್ ಬಂಡವಾಳ ಹೂಡಿದ್ದಾರೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದ್ದು ಸುಮಾರು 70ರಷ್ಟು ಚಿತ್ರೀಕರಣ ಮಾಡಿ ಮುಗಿದ್ದಾರೆ. ಸದ್ಯ ಮೋಷನ್ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿದ್ದು ಮುಂದಿನ ವರ್ಷದ ಪ್ರಾರಂಭದಲ್ಲಿ ತೆರೆಮೇಲೆ ಬರುವ ಪ್ಲಾನ್ ಮಾಡಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...