Wednesday, April 30, 2025
Google search engine
Homeಶಿವಮೊಗ್ಗರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ...

ರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ ಲಭ್ಯ..!

ಶಿವಮೊಗ್ಗ: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಮೆಟ್ರೋ ಸಮೂಹ ಸಂಸ್ಥೆಗಳ ವತಿಯಿಂದ ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು.

ವಿಶೇಷವೆಂದರೆ ರೋಗಿಗಳಿಂದಲೇ ಸಮಾರಂಭವನ್ನು ಉದ್ಘಾಟಿಸಲಾಯಿತು ಇವರಿಗೆ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ಚೆನ್ನಿ ಅವರು ಸಾಥ್ ನೀಡಿದರು.

ಸಮಾರಂಭದಲ್ಲಿ ಶಿವಮೊಗ್ಗದ ಶಾಸಕರಾದ ಎಸ್. ಎನ್ ಚೆನ್ನಬಸಪ್ಪ ಮತ್ತು ಜಿಲ್ಲಾ ಆರೋಗ್ಯಧಿಕಾರಿಗಳಾದ ಡಾ. ರಾಜೇಶ್ ಸುರಗಿಹಳ್ಳಿ, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಪಿ. ಲಕ್ಷ್ಮೀನಾರಾಯಣ ಆಚಾರ್, ಸಿ. ಇ . ಓ ಆದ ಡಾ. ತೇಜಸ್ವಿ ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ ಹಾಗೂ ಮೆಟ್ರೋ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಪೃಥ್ವಿಯವರು ಮಾತನಾಡಿ ಡಯಾಬಿಟಿಸ್ ರೋಗಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಡಯಾಬಿಟಿಸ್ ರೋಗಿಗಳಿಗೆ ಅವರ ರೋಗದ ತೀವ್ರತೆ ಯಾವ ಪ್ರಮಾಣದಲ್ಲಿದೆ ಎನ್ನುವುದನ್ನು ಪತ್ತೆ ಹಚ್ಚುವ ಯಂತ್ರ ಇದಾಗಿದ್ದು ಇದರ ಆಧಾರದ ಮೇಲೆ ರೋಗಿಗಳು ಯಾವ ಪಾದರಕ್ಷೆಗಳನ್ನು ಧರಿಸಬೇಕು ಎನ್ನುವ ನಿರ್ಧಾರವನ್ನು ಕೂಡ ಮಾಡಿ ನಂತರ ಅವರಿಗೆ ಆ ಪಾದರಕ್ಷೆಗಳನ್ನು ಕೂಡ ನೀಡುವ ದೃಷ್ಟಿಯಿಂದ ವಿಶೇಷವಾಗಿ ವಿನೂತನವಾಗಿ ಡಯಾಬಿಟಿಸ್ ಪೇಷಂಟ್ ಗಳಿಗೆ ಗೋಸ್ಕರ ನೇ ಈ ಯಂತ್ರವನ್ನು ತರಿಸಲಾಗಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಡಾಕ್ಟರ್ ಪೃಥ್ವಿಯವರು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...