Wednesday, April 30, 2025
Google search engine
Homeಶಿವಮೊಗ್ಗದಿನಪತ್ರಿಕೆಗಳ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ದಿನಪತ್ರಿಕೆ ವಿತರಕರ ದಿನಾಚರಣೆ ಕಾರ್ಯಕ್ರಮ...

ದಿನಪತ್ರಿಕೆಗಳ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ದಿನಪತ್ರಿಕೆ ವಿತರಕರ ದಿನಾಚರಣೆ ಕಾರ್ಯಕ್ರಮ…

ಶಿವಮೊಗ್ಗ: ಬದಲಾದ ಕಾಲಘಟ್ಟದಲ್ಲಿ ಪತ್ರಿಕೆ ವಿತರಣೆ ಮಾಡುವುದು ಕಷ್ಟಕರ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಇಂಥ ಪರಿಸ್ಥಿತಿ ಯಲ್ಲಿ ಪತ್ರಿಕಾ ವಿತರ ಕರು ಸಂಘಟಿತರಾಗದ ಹೊರತು ಸೌಲಭ್ಯ ಪಡೆಯಲು ಸಾಧ್ಯವಿಲ್ಲ ಎಂದು ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು.


ಪತ್ರಿಕಾ ಭವನ ಸಭಾಂಗಣ ದಲ್ಲಿ ದಿನಪತ್ರಿಕೆ ಉಪಪ್ರತಿ ನಿಧಿಗಳ ಕ್ಷೇಮಾಭಿವೃದ್ಧಿ ಸಂಘ ಹಮ್ಮಿ ಕೊಂಡಿದ್ದ ದಿನಪತ್ರಿಕೆ ವಿತರಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ದೃಶ್ಯ ಮಾಧ್ಯಮ, ವೆಬ್ ಮೀಡಿಯಾ, ಸಾಮಾಜಿಕ ಜಾಲತಾಣ ಸೇರಿದಂತೆ ಹಲವು ಸವಾಲುಗಳ ಮಧ್ಯೆ ಮುದ್ರಣ ಮಾಧ್ಯಮ ಮೇರು ಸ್ಥಾನದಲ್ಲಿ ಇದೆ ಎನ್ನುವುದು ಸಮಾಧಾನದ ವಿಷಯ.ಬಹು ತೇಕರು ಜೀವನ ನಿರ್ವಹಣೆ ಗಾಗಿ ಅರೆಕಾಲಿಕ ವೃತ್ತತಯಾಗಿರುವ ಪತ್ರಿಕೆ ಹಂಚುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಕಾಯಕ ನಿಜಕ್ಕೂ ಆರೋಗ್ಯಕ್ಕೆ ಸಹಕಾರಿಯಾಗಿದೆ. ಪ್ರತಿನಿತ್ಯ ಮುಂಜಾನೆಯೇ ಹೇಳುವುದು, ಪ್ರತಿನಿತ್ಯ ಸೈಕಲ್ ತುಳಿಯುವುದು ಆರೋಗ್ಯ ನಿರ್ವಹಣೆಗೂ ಸಹಕಾರಿಯಾಗಿದೆ ಎಂದರು.


ಪತ್ರಿಕೆ ವಿತರಣೆ ಮಾಡುವ ವ್ಯಕ್ತಿಗಳನ್ನು ಕೆಲವರು ಕೀಳಾಗಿ ಕಾಣುವ ಮನಃಸ್ಥಿತಿ ಇದೆ. ಅಂತಹ ಕೀಳರಿಮೆ ತೊರೆಯಬೇಕು. ದೇಶದ ಹಲವು ಮಹಾನ್ ವ್ಯಕ್ತಿಗಳು ಕೂಡ ಪತ್ರಿಕೆ ಹಂಚುವ ಕೆಲಸ ಮಾಡುತ್ತಾ ದೇಶದ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಯಾವುದೇ ಕೆಲಸದಲ್ಲಿ ಕೀಳರಿಮೆ ಹೊಂದಬಾರದು ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮುಕ್ತಾರ್ ಅಹ್ಮದ್ ಮಾತನಾಡಿ, ಅಸಂಘಟಿತ ವಲಯಕ್ಕೆ ಸೇರಿಸುವ ಸರ್ಕಾರದ ನಿರ್ಧಾರ ಘೋಷಣೆಗೆ ಸೀಮಿತವಾಗಬಾರದೇ, ಅದು ಕಾರ್ಯರೂಪಕ್ಕೆ ಬರಬೇಕು ಎಂದು ಮನವಿ ಮಾಡಿದರು.
ಕೊರೋನಾ ಸಂದರ್ಭದಲ್ಲಿ ಪತ್ರಿಕಾ ವಿತರಕರು ಸಾಕಷ್ಟು ಸಮಸ್ಯೆಗೆ ಸಿಲುಕಿದ್ದರು. ಆಸಂದರ್ಭದಲ್ಲಿ ಅಪಪ್ರಚಾರವನ್ನು ನಡೆಸಲಾಯಿತು. ಈ ರೀತಿ ಅಪಪ್ರಚಾರ ನಡೆಸಬಾರದು ಎಂದು ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಪತ್ರಕರ್ತ ಚಂದ್ರಹಾಸ ಹಿರೇಮಳಲಿ, ಕೆ.ಎಸ್. ಸತೀಶ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ದಿನಪತ್ರಿಕೆ ವಿತರಕರಾದ ಜಯರಾಮ, ಸೀತಾರಾಮ, ಪರಮೇಶ್ವರಪ್ಪ, ಮಂಜುನಾಥ್, ನಾಗರಾಜ ನಾಯ್ಕ, ರಾಮಚಂದ್ರ ಹಾಗೂ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳಾದ ಮಂಜುನಾಥ್, ಗಣೇಶ್ ಭಟ್, ಮಾಲತೇಶ್, ಅರುಣ್, ಹರೀಶ್ ಇತರರು ಹಾಜರಿದ್ದರು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...