Wednesday, April 30, 2025
Google search engine
Homeಶಿವಮೊಗ್ಗShivamogga breaking: ತುಂಗಾ ಮೇಲ್ದಂಡೆಯ ಎಡನಾಲೆಯ ಅಕ್ಕಪಕ್ಕ ಎಗ್ಗಿಲ್ಲದೇ ನಡೆಯುತ್ತಿದೆ ಮಣ್ಣು ಮತ್ತು ಕಲ್ಲು ಗಣಿಗಾರಿಕೆ...

Shivamogga breaking: ತುಂಗಾ ಮೇಲ್ದಂಡೆಯ ಎಡನಾಲೆಯ ಅಕ್ಕಪಕ್ಕ ಎಗ್ಗಿಲ್ಲದೇ ನಡೆಯುತ್ತಿದೆ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಒತ್ತುವರಿ..! Exclusive ಫೋಟೋಗಳು ಪತ್ರಿಕೆಗೆ ಲಭ್ಯ..!

ಶಿವಮೊಗ್ಗ: ಗಾಜನೂರು ಸಮೀಪ ತುಂಗಾ ಮೇಲ್ದಂಡೆ ಎಡನಾಲೆಯ ಅಕ್ಕಪಕ್ಕ ಅಕ್ರಮ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಒತ್ತುವರಿ ನಡೆಯುತ್ತಿದ್ದು ಅಧಿಕಾರಿಗಳು ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ.

ನಾಗರಾಜ್ ಎನ್ನುವ ವ್ಯಕ್ತಿ ಬಗರಹುಕಂ ಜಾಗ ತನ್ನದು ಇದೆ ಎಂದು ಒತ್ತುವರಿ ಮಾಡಿಕೊಂಡು ಮಣ್ಣು ತೆಗೆಯುವ ನೆಪದಲ್ಲಿ ಕಲ್ಲು ಮಣ್ಣು ಎರಡನ್ನು ಆಕ್ರಮವಾಗಿ ತೆಗೆದು ಮಾರಾಟ ಮಾಡುತ್ತಿದ್ದು ಇದರ ಬಗ್ಗೆ ತುಂಗಾ ಮೇಲ್ದಂಡೆ ಎಡನಾಲೆಯ ಅಧಿಕಾರಿಗಳು ಆತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೆ ಆತನ ವಿರುದ್ಧ ಎಫ್ಐಆರ್ ದಾಖಲಿಸಿದೆ ಪೊಲೀಸರು ನಿಮ್ಮ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಉಡಾಫೆ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗಾದರೆ ಇದನ್ನು ನೋಡಿಕೊಳ್ಳುವವರು ಯಾರು ನಿರಂತರವಾಗಿ ಹಗಲು ರಾತ್ರಿ ಎನ್ನದೆ ಇಲ್ಲಿ ಅಕ್ರಮ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಭೂಮಂಡಲವನ್ನು ದೋಚುವ ಕೆಲಸ ನಡೆಯುತ್ತಿದೆ ಈ ನಾಗರಾಜ ಎನ್ನುವ ವ್ಯಕ್ತಿಯಿಂದ ಈತನ ಅಕ್ರಮಕ್ಕೆ ಕಡಿವಾಣ ಹಾಕಲು ತುಂಗಾ ಮೇಲ್ದಂಡೆ ಎಡನಾಲೆಯ ಅಧಿಕಾರಿಗಳು ಇನ್ನಾದರೂ ಕಾರ್ಯಾಮುಖವಾಗುತ್ತಾರ..? ಶಿವಮೊಗ್ಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಅವರು ಕೂಡಲೇ ಕಾರ್ಯಪ್ರವೃತ್ತರಾಗಿ ಇದನ್ನು ಇಲ್ಲಿಗೆ ನಿಲ್ಲಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಾರಾ ‌.?ತುಂಗಾನಗರ ಪೊಲೀಸ್ ಠಾಣೆಯ ದಕ್ಷ ಅಧಿಕಾರಿ ಮಂಜುನಾಥ್ ಅವರು ಎಫ್ಐಆರ್ ಹಾಕದೆ ನಿರ್ಲಕ್ಷ ವಹಿಸಿದ್ದು ಏಕೆ..? ಇನ್ನಾದರೂ ಆತನ ವಿರುದ್ಧ ದೂರು ದಾಖಲಿಸಿ ಈ ಅಕ್ರಮಕ್ಕೆ ಕಡಿವಾಣ ಹಾಕುತ್ತಾರ ಕಾದು ನೋಡಬೇಕು.

ರಘುರಾಜ್ ಹೆಚ್‌. ‌ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...