Sunday, June 15, 2025
Google search engine
Homeತೀರ್ಥಹಳ್ಳಿThirthalli: ಸಹಕಾರಿ ರತ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ/ ಮಂಜುನಾಥ್ ಗೌಡರಿಗೆ ತವರಿನಲ್ಲಿ ಅದ್ದೂರಿ ಸನ್ಮಾನಕ್ಕೆ...

Thirthalli: ಸಹಕಾರಿ ರತ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ/ ಮಂಜುನಾಥ್ ಗೌಡರಿಗೆ ತವರಿನಲ್ಲಿ ಅದ್ದೂರಿ ಸನ್ಮಾನಕ್ಕೆ ಸಿದ್ಧತೆ..!

ತೀರ್ಥಹಳ್ಳಿ: ನಾಳೆ ತೀರ್ಥಹಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ ಗೌಡ ಅವರಿಗೆ ತೌರೂರ ಸಂಮಾನ ಕಾರ್ಯಕ್ರಮಕ್ಕೆ ಅದ್ದೂರಿ ತಯಾರಿ ನಡೆಯುತ್ತಿದ್ದು.

ಈಗಾಗಲೇ ಇದರ ಸಂಬಂಧವಾಗಿ ಮಂಜುನಾಥ್ ಗೌಡರ ಅಭಿಮಾನಿಗಳು ಹಿತೈಷಿಗಳು ಬಂಧುಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಒಗ್ಗಟ್ಟಾಗಿ 15 ದಿನದಿಂದ ಈ ಕಾರ್ಯದಲ್ಲಿ ತೊಡಗಿದ್ದಾರೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ತಿಂಗಳ ಆರನೇ ತಾರೀಕು ಈ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಇಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದರಿಂದ ಆ ಕಾರ್ಯಕ್ರಮ ಮುಂದೂಡಲಾಗಿತ್ತು.

ಈಗ ಅದೇ ಆರನೇ ತಾರೀಕು ಮತ್ತೆ ಕಾರ್ಯಕ್ರಮ ನಡೆಸಲು ಮುಂದಾಗಿದ್ದು ಅದ್ದೂರಿ ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದು ತೀರ್ಥಹಳ್ಳಿಯ ರಾಜಕೀಯಕ್ಕೆ ಹಾಗೂ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿ ಆಗಲಿದೆಯಾ ಎನ್ನುವ ಗುಸು-ಗುಸು ಎಲ್ಲೆಡೆ ಹರಿದಾಡುತ್ತಿದೆ.

ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರು ಒಟ್ಟಿಗೆ ಸೇರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸ್ವತಃ ಕಿಮ್ಮನೆ ರತ್ನಾಕರ್ ಅವರೇ ಮುಂದಾಳತ್ವ ವಹಿಸಿರುವುದು ಎಲ್ಲರಿಗೂ ಅಚ್ಚರಿತಂದಿದೆ.

ಏಕೆಂದರೆ ಹಿಂದೆ ಹಲವು ಸಾರಿ ಇವರ ನಡುವೆ ಶೀತಲ ಸಮರ ಏರ್ಪಾಡಾಗಿತ್ತು ಆದರೆ ಈಗ ಕಿಮ್ಮನೆ ರತ್ನಾಕರವರೇ ಮಂಜುನಾಥ್ ಗೌಡರಿಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿದ್ದು ತೀರ್ಥಹಳ್ಳಿ ಕಾಂಗ್ರೆಸ್ ಪಾಳ್ಯದಲ್ಲಿ ಹರ್ಷ ವ್ಯಕ್ತವಾಗಿದೆ.

ನಾಳಿನ ಕಾರ್ಯಕ್ರಮ ಕುತೂಹಲ ಕೆರಳಿಸಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!