Wednesday, April 30, 2025
Google search engine
Homeತೀರ್ಥಹಳ್ಳಿThirthalli: ಸಹಕಾರಿ ರತ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ/ ಮಂಜುನಾಥ್ ಗೌಡರಿಗೆ ತವರಿನಲ್ಲಿ ಅದ್ದೂರಿ ಸನ್ಮಾನಕ್ಕೆ...

Thirthalli: ಸಹಕಾರಿ ರತ್ನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ/ ಮಂಜುನಾಥ್ ಗೌಡರಿಗೆ ತವರಿನಲ್ಲಿ ಅದ್ದೂರಿ ಸನ್ಮಾನಕ್ಕೆ ಸಿದ್ಧತೆ..!

ತೀರ್ಥಹಳ್ಳಿ: ನಾಳೆ ತೀರ್ಥಹಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ ಗೌಡ ಅವರಿಗೆ ತೌರೂರ ಸಂಮಾನ ಕಾರ್ಯಕ್ರಮಕ್ಕೆ ಅದ್ದೂರಿ ತಯಾರಿ ನಡೆಯುತ್ತಿದ್ದು.

ಈಗಾಗಲೇ ಇದರ ಸಂಬಂಧವಾಗಿ ಮಂಜುನಾಥ್ ಗೌಡರ ಅಭಿಮಾನಿಗಳು ಹಿತೈಷಿಗಳು ಬಂಧುಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಒಗ್ಗಟ್ಟಾಗಿ 15 ದಿನದಿಂದ ಈ ಕಾರ್ಯದಲ್ಲಿ ತೊಡಗಿದ್ದಾರೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ತಿಂಗಳ ಆರನೇ ತಾರೀಕು ಈ ಕಾರ್ಯಕ್ರಮ ನಡೆಯಬೇಕಿತ್ತು ಆದರೆ ಇಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದರಿಂದ ಆ ಕಾರ್ಯಕ್ರಮ ಮುಂದೂಡಲಾಗಿತ್ತು.

ಈಗ ಅದೇ ಆರನೇ ತಾರೀಕು ಮತ್ತೆ ಕಾರ್ಯಕ್ರಮ ನಡೆಸಲು ಮುಂದಾಗಿದ್ದು ಅದ್ದೂರಿ ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದು ತೀರ್ಥಹಳ್ಳಿಯ ರಾಜಕೀಯಕ್ಕೆ ಹಾಗೂ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿ ಆಗಲಿದೆಯಾ ಎನ್ನುವ ಗುಸು-ಗುಸು ಎಲ್ಲೆಡೆ ಹರಿದಾಡುತ್ತಿದೆ.

ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರು ಒಟ್ಟಿಗೆ ಸೇರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸ್ವತಃ ಕಿಮ್ಮನೆ ರತ್ನಾಕರ್ ಅವರೇ ಮುಂದಾಳತ್ವ ವಹಿಸಿರುವುದು ಎಲ್ಲರಿಗೂ ಅಚ್ಚರಿತಂದಿದೆ.

ಏಕೆಂದರೆ ಹಿಂದೆ ಹಲವು ಸಾರಿ ಇವರ ನಡುವೆ ಶೀತಲ ಸಮರ ಏರ್ಪಾಡಾಗಿತ್ತು ಆದರೆ ಈಗ ಕಿಮ್ಮನೆ ರತ್ನಾಕರವರೇ ಮಂಜುನಾಥ್ ಗೌಡರಿಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿದ್ದು ತೀರ್ಥಹಳ್ಳಿ ಕಾಂಗ್ರೆಸ್ ಪಾಳ್ಯದಲ್ಲಿ ಹರ್ಷ ವ್ಯಕ್ತವಾಗಿದೆ.

ನಾಳಿನ ಕಾರ್ಯಕ್ರಮ ಕುತೂಹಲ ಕೆರಳಿಸಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...