Sunday, June 15, 2025
Google search engine
Homeರಾಷ್ಟ್ರೀಯShivamogga: ಅಖಿಲ ಭಾರತೀಯ ಸಹಕಾರಿ ಸಪ್ತಾಹ..!

Shivamogga: ಅಖಿಲ ಭಾರತೀಯ ಸಹಕಾರಿ ಸಪ್ತಾಹ..!

ಶಿವಮೊಗ್ಗ: ಮಾಜಿ ಪ್ರಧಾನಿ ನೆಹರೂ ದಿನ ಮಕ್ಕಳ ದಿನಾಚರಣೆಯ ದಿನದಂದು 70 ನೇ ಅಖಿಲ ಭಾರತೀಯ  ಸಹಕಾರಿ ಸಪ್ತಾಹವನ್ನ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು.

ಇಂದು ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸುದ್ದಿಗೋಷ್ಠಿನಡೆಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್ ಎಂ ಮಂಜುನಾಥ್ ಗೌಡ ಏಳು ದಿನ ಈ ದಿನಾಚರಣೆ ನಡೆಯಲಿದೆ. ಜಿಲ್ಲಾ ಸಹಕಾರಿ ಯೂನಿಯನ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ಏಳುದಿನ ವಿವಿಧ ಜಿಲ್ಲೆಯಲ್ಲಿ ನಡೆದರೆ ಜಿಲ್ಲೆಯ ಏಳು ದಿನ ವಿವಿಧ ತಾಲೂಕಿನಲ್ಲಿ ನಡೆಯಲಿದೆ ಎಂದರು.

ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಬೇಕಾಗಿತ್ತು . ಆದರೆ ಬರ ಹಿನ್ನಲೆಯಲ್ಲಿ ಸಿಎಂ‌ ಭಾಗಿಯಾಗುತ್ತಿಲ್ಲ.  ಹಿರಿಯ ಸಹಕಾರಿಗಳು ಸಹಕಾರಿ ದೂರಿಣರು ಹಾಗೂ ಹಾಲಿ ಸಹಕಾರಿ ಸಚಿವರಾದ ರಾಜಣ್ಣ ಉದ್ಘಾಟಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಚಿತ್ರದುರ್ಗದ ಉಸ್ತುವಾರಿ ಸುಧಾಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿಯಾಗಲಿದ್ದಾರೆ. ಮಾಜಿ ಮಂತ್ರಿ ಜಿ.ಡಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಇದರ ಉದ್ದೇಶ 5 ಟ್ರಿಲಿಯನ್ ಆರ್ಥಿಕ ಗುರಿ ಮುಟ್ಟಬೇಕು ಇದರ ಬಗ್ಗೆ ಏಳುದಿನ ನಡೆಯಲಿದೆ. ಮೊದಲನೇ ದಿನ ಸಂಪನ್ಮೂಲ ವ್ಯಕ್ತಿಗಳು ನಡೆಸುತ್ತಾರೆ. ಸರ್ಕಾರವೇ ಈ ಕಾರ್ಯಕ್ರಮ ನಡೆಸುತ್ತಿದೆ. ಸಹಕಾರಿ ಸಂಸ್ಥೆಗಳ ವಸ್ತುಪ್ರದರ್ಶನ, ರೈತರಿಗೆ ಬೇಕಾದ ವಸ್ತುಗಳ ವಸ್ತು ಪ್ರದರ್ಶನ, ಚಿಕ್ಕದಾಗಿ ಚೊಕ್ಕದಾಗಿ ಸಾಂಕೇತಿಕವಾಗಿ ಮಾಡಲಾಗುತ್ತದೆ.

ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್  ಮ್ಯಾಮ್ ಕೋಸ್ ಸಂಸ್ಥೆ, ಸೊಸೈಟಿ, ಮಹಿಳಾ ಸಹಕಾರಿ ಸಂಸ್ಥೆಗಳಿವೆ. ಆತ್ಮವಲೋಕನ ಕಾರ್ಯಕ್ರಮ ನಡೆಯಲಿದೆ. ಶಿವಮೊಗ್ಗದಲ್ಲಿ ನ.14 ರಂದು ಸಹಕಾರ ಸಂಘ ಸಂಸ್ಥೆಗಳಲ್ಲಿ ಇತ್ತೀಚಿನ ಬೆಳವಣಿಗೆಗಳು ಕುರಿತು ಕಾರ್ಯಕ್ರಮ ನಡೆದರೆ,

ನ.15 ರಂದು  ರಾಯಚೂರು, ನ.16 ರಂದು ಶಿರಸಿ, ನ.17 ರಂದು ಹುಬ್ಬಳ್ಳಿಯಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯನ್ಮುಖವಲಯಗಳ  ಕುರಿತು ಕಾರ್ಯಕ್ರಮ ನಡೆಯಲಿದೆ. ನ.18 ರಂದು ಮಂಗಳೂರಿನಲ್ಲಿ ಸಹಕಾರಿ ಸಹಭಾಗಿತ್ವ ಬಲಪಡಿಸುವ ವಿಚಾರ ನಡೆಯಲಿದೆ

ಬೆಂಗಳೂರಿನಲ್ಲೂ ಕಾರ್ಯಕ್ರಮ ನಡೆಯಲಿದೆ. ಏಳು ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನ ಸಮಾರೋಪ ಸಮಾರಂಭವನ್ನ ಬಿಜಾಪುರದಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಏಳು ದಿನ ಏಳು ತಾಲೂಕಿನ ಸಹಕಾರಿ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ನ. 15 ರಂದು ಶಿಕಾರಿಪುರ, ನ.16 ರಂದು ಭದ್ರಾವತಿ, ನ.17 ರಂದು ಸೊರಬ, ನ.18 ತೀರ್ಥಹಳ್ಳಿ,  ನ.19 ರಂದು ಸಾಗರ, ನ. 20 ರಂದು ಹೊಸನಗರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!