Sunday, June 15, 2025
Google search engine
Homeಶಿವಮೊಗ್ಗಆರೋಗ್ಯಸಮದಾಯ ಆರೋಗ್ಯಾಧಿಕಾರಿ ಜಯಶ್ರೀಯವರಿಗೆ ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ಆತ್ಮೀಯ ಬೀಳ್ಕೊಡುಗೆ..!

ಸಮದಾಯ ಆರೋಗ್ಯಾಧಿಕಾರಿ ಜಯಶ್ರೀಯವರಿಗೆ ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ಆತ್ಮೀಯ ಬೀಳ್ಕೊಡುಗೆ..!



ಪ್ರಾ.ಆ.ಕೇಂದ್ರ ಮೇಗರವಳ್ಳಿಯ ರಂಜದಕಟ್ಟೆ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿದ್ದ ಜಯಶ್ರೀಯವರು ಭುವನೇಶ್ವರದ ಏಮ್ಸ್ ಸಂಸ್ಥೆಯ ಶುಶ್ರೂಷಣಾಧಿಕಾರಿಯಾಗಿ ನೇಮಕಗೊಂಡಿದ್ದರಿಂದ ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ನಡೆದ ಭಾವಪೂರ್ಣ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಗೌರವಿಸಿ, ಹಾರ್ದಿಕವಾಗಿ ಶುಭ ಹಾರೈಸಿ ಬೀಳ್ಕೊಡಲಾಯಿತು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ ಮಾತನಾಡಿ, ಅತ್ಯಂತ ತಾಳ್ಮೆ, ಶ್ರದ್ದೆ, ವಿನಮ್ರತೆ,ಸೇವಾ ಮನೋಭಾವಗಳಿಂದ ಜಯಶ್ರೀ ಮಾದರಿಯಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಎಲ್ಲರ ಪ್ರೀತಿ ವಿಶ್ವಾಸಗಳನ್ನು ಗಳಿಸಿದ್ದಾರೆ. ಅಷ್ಟೇ ಅಲ್ಲದೆ ಅಪಾರ ಪ್ರತಿಭಾವಂತರಾದ ಅವರು ಅಖಿಲ ಭಾರತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ  ಏಮ್ಸ್ ಸಂಸ್ಥೆಯ ಶುಶ್ರೂಷಣಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇದು ಕಡಿಮೆ ಸಾಧನೆಯಲ್ಲ. ಅವರು ಇನ್ನಷ್ಟು ಹೆಚ್ಚಿನ ಸಾಧನೆ ಮಾಡಲಿ. ಅವರಿಂದ ಇನ್ನಷ್ಟು ಹೆಚ್ಚಿನ ಸೇವೆ ಸಮಾಜಕ್ಕೆ ದೊರಕಲಿ ಎಂದು ಶುಭ ಹಾರೈಸಿದರು.

 ಹಿರಿಯ ಪ್ರಾ.ಆ.ಸುರಕ್ಷಾಧಿಕಾರಿ ನೀಲಮ್ಮ, ಪ್ರಾ.ಆ.ಸುರಕ್ಷಾಧಿಕಾರಿಳಾದ ವೀಣಾ ಎಂ ಪಿ, ನಾಗರತ್ನ ಎ ಜಿ ,ಆರೋಗ್ಯ ನಿರೀಕ್ಷಣಾಧಿಕಾರಿ ಹನುಮಂತ ರೆಡ್ಡಿ, ಸಮುದಾಯ ಆರೋಗ್ಯಾಧಿಕಾರಿಗಳಾದ ಕೈಲಾಶ್, ಲಿಷಾ,ರಾಘವೇಂದ್ರ, ಸಂಧ್ಯಾ,ಮೀನಾಕ್ಷಿ,ರೆನಿಟಾ, ಆಶಾ ಫೆಸಿಲಿಟೇಟರ್ ರೇಖಾ,ಆಶಾ ಕಾರ್ಯಕರ್ತೆಯರಾದ ಸವಿತ,ರೂಪ ಮತ್ತಿತರರು ಅವರ ಉತ್ತಮ ಸೇವೆಯನ್ನು ಶ್ಲಾಘಿಸಿ ಶುಭ ಹಾರೈಸಿದರು.

ವೈದ್ಯಾಧಿಕಾರಿ ಡಾ.ರಂಜಿತ ಎನ್ ಎಸ್ ಅಧ್ಯಕ್ಷತೆ ವಹಿಸಿದ್ದರು. ಶುಶ್ರೂಷಣಾಧಿಕಾರಿ ನಿರ್ಮಲ, ಫಾರ್ಮಸಿ ಅಧಿಕಾರಿ ಸನ್ನಿಧಿ, ಪ್ರ ದ ಸಹಾಯಕ ನವೀನ್ ಕುಮಾರ್,,ಡಿ ದರ್ಜೆ ನೌಕರರಾದ ಪಾರ್ವತಿ, ಆಶಾ ಫೆಸಿಲಿಟೇಟರ್ ತೇಜಾವತಿ, ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

 ಆಶಾ ಕಾರ್ಯಕರ್ತೆ ಸುಧಾ ಪ್ರಾರ್ಥಿಸಿ, ನಾಗರತ್ನ ಸ್ವಾಗತಿಸಿ,ಹನುಮಂತ ರೆಡ್ಡಿ ನಿರೂಪಿಸಿ,ವಂದಿಸಿದರು.
RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!