
ತೀರ್ಥಹಳ್ಳಿ : ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಅವರು ಅನಾರೋಗ್ಯದಿಂದ ಅಗಲಿದ್ದಾರೆ ಅವರ ಅಂತ್ಯಕ್ರಿಯೆ ನಾಳೆ ಅವರ ಸ್ವಗ್ರಾಮ ಬಾಂಡ್ಯಾಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಬೀಡು ಗ್ರಾಮದಲ್ಲಿ ನೆರವೇರಲಿದೆ ಕುಟುಂಬದ ಮೂಲಗಳು ತಿಳಿಸಿವೆ.
ಪ್ರಕಾಶ್ ಅವರು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹತ್ತು ವರ್ಷಗಳ ಕಾಲ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಗ್ರೇಡ್ 2 ಸೆಕ್ರೆಟರಿ ಯಾಗಿ 12 ವರ್ಷಗಳ ಕಾಲ ಹಣಗೇರಿ ಕಟ್ಟೆಯಲ್ಲಿ ಕಾರ್ಯನಿರ್ವಹಿಸಿದರು. ನಂತರ ಪ್ರಮೋಷನ್ ಪಡೆದು ಗ್ರೇಡ್ 1 ಅಧಿಕಾರಿಯಾಗಿ ಹುಂಚದ ಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ತೂದೂರು ಗ್ರಾಮ ಪಂಚಾಯಿತಿಗೆ ಬಂದಿದ್ದು. ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಇನ್ನೇನು ಎರಡು ಮೂರು ವರ್ಷಗಳ ಕಾಲ ನಿವೃತ್ತಿ ಆಗುವವರಿದ್ದರು. ಆದರೆ ಕಾಯಿಲೆ ಅವರನ್ನು ಕಾಡುತ್ತಿತ್ತು ಇತ್ತೀಚಿಗೆ ಬೈಪಾಸ್ ಸರ್ಜರಿ ಆಗಿತ್ತು ಮಣಿಪಾಲ್ ನಲ್ಲಿ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ನಿಧನ ಹೊಂದಿದ್ದಾರೆ.
ಇವರ ನಿಧನಕ್ಕೆ ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತೂದೂರು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರು ಸಂತಾಪ ಸೂಚಿಸಿದ್ದಾರೆ.
ರಘುರಾಜ್ ಹೆಚ್.ಕೆ.9449553305.