Wednesday, April 30, 2025
Google search engine
Homeಶಿವಮೊಗ್ಗShivamogga Traffic police: ಪಶ್ಚಿಮ ಸಂಚಾರಿ ಠಾಣೆ ಪಿಎಸ್ಐ ತಿರುಮಲೇಶ್ ಉತ್ತಮ ಕಾರ್ಯ ವೀಲಿಂಗ್ ಸವಾರರಿಗೆ...

Shivamogga Traffic police: ಪಶ್ಚಿಮ ಸಂಚಾರಿ ಠಾಣೆ ಪಿಎಸ್ಐ ತಿರುಮಲೇಶ್ ಉತ್ತಮ ಕಾರ್ಯ ವೀಲಿಂಗ್ ಸವಾರರಿಗೆ ನ್ಯಾಯಾಲಯದಿಂದ ಬಿತ್ತು ದಂಡ..!

ಶಿವಮೊಗ್ಗ: ನಗರದಲ್ಲಿ ಇತ್ತೀಚಿಗೆ ಬೈಕ್ ವೀಲಿಂಗ್ ಸವಾರರ ಹಾವಳಿ ಮಿತಿಮೀರಿದ್ದು ಟ್ರಾಫಿಕ್ ಪೊಲೀಸ್ ನವರು ಇದಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ತಮ್ಮ ಜೀವಕ್ಕೆ ಅಪಾಯ ಮಾಡಿಕೊಳ್ಳುವುದರ ಜೊತೆಗೆ ಬೇರೆಯವರಿಗೂ ತೊಂದರೆ ನೀಡುತ್ತಿರುವವರ ಇಂಥವರ ವಿರುದ್ಧ ಶಿವಮೊಗ್ಗ ಜಿಲ್ಲಾ ಟ್ರಾಫಿಕ್ ಪೊಲೀಸ್ ನವರು ಸಿಡಿದೆದ್ದಿದ್ದು ಎಲ್ಲೆಡೆ ಪ್ರಕರಣಗಳನ್ನು ದಾಖಲು ಮಾಡುತ್ತಿದ್ದಾರೆ. ಆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘನ ನ್ಯಾಯಾಲಯ ಕೂಡ ಇಂತಾ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದು ನಿರಂತರವಾಗಿ ದಂಡ ವಿಧಿಸುತ್ತಿದ್ದಾರೆ. ಅಂತದ್ದೇ ಒಂದು ಪ್ರಕರಣದಲ್ಲಿ ದಿನಾಂಕ15/08/2023 ರಂದು ಬೆಳಿಗ್ಗೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ರಸ್ತೆಯಲ್ಲಿ ಫೈಸಲ್ ಅಹ್ಮದ್ ಮತ್ತು ಸೂಫಿಯಾನ್ ಖಾನ್ ಎಂಬ ಯುವಕರಿಬ್ಬರು ಎರಡು YAMAHA RX ಬೈಕಿಗಳಲ್ಲಿ ಅತಿ ವೇಗ, ಅಜಾಗರುಕತೆ ಮತ್ತು ಅಪಾಯಕಾರಿ ರೀತಿಯಲ್ಲಿ ಸಾರ್ವಜನಿಕರ ಮತ್ತು ತನ್ನ ಪ್ರಾಣಕ್ಕೆ ಹಾನಿಯಾಗುವಂತೆ ವ್ಹೀಲಿಂಗ್ ಮಾಡುತ್ತಿದ್ದು,ಈ ಬಗ್ಗೆ ಗುನ್ನೆ ಸಂಖ್ಯೆ 0107/2023 ಕಲಂ 279 ಐಪಿಸಿ, 184, 189, 177 ಐಎಂವಿ ಕಾಯ್ದೆ ಮತ್ತು 51 ಸಿಎಂವಿ ರೂಲ್ ರೀತ್ಯಾ ಪ್ರಕರಣ ದಾಖಲಿಸಿಕೊಂಡಿರುತ್ತಾರೆ

ಶಿವಮೊಗ್ಗ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ಆದ ತಿರುಮಲೇಶ್ ಅವರು ಈ ಪ್ರಕರಣದ ತನಿಖಾಧಿಕಾರಿಗಳಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಕ್ ಗಳ ಚಾಲಕರು & ಮಾಲೀಕ ಸೇರಿ 3 ಜನ ಆರೋಪಿತರ ವಿರುದ್ದ ಘನ ನ್ಯಾಯಾಲಯಕ್ಕೆ ದೋಷರೋಪಣ ಪತ್ರವನ್ನು ಸಲ್ಲಿಸಿದರು. ಘನ ನ್ಯಾಯಾಲಯದಲ್ಲಿ ಕಿರಣ್ ಕುಮಾರ್ ಸಹಾಯಕ ಸರ್ಕಾರಿ ಅಭಿಯೋಜಕರು ಪ್ರಕರಣವಾದ ಮಂಡಿಸಿದ್ದು, ಘನ 3ನೇ ಎಸಿಜೆ & ಜೆಎಂಎಫ್ ಸಿ, ಶಿವಮೊಗ್ಗ, ನ್ಯಾಯಾಲಯದಲ್ಲಿಪ್ರಕರಣದ ವಿಚಾರಣೆ ನಡೆದಿದ್ದು, ಪ್ರಕರಣದ ಆರೋಪಿತರ ವಿರುದ್ಧ ಆರೋಪ ದೃಢ ಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಧೀಶರಾದ ಮಾಯಪ್ಪ ರವರು ದಿನಾಂಕ:-06/12/2023ರಂದು ಆರೋಪಿ 1) ಫೈಸಲ್ ಅಹ್ಮದ್, 20 ವರ್ಷ, ಇಲಿಯಾಸ್ ನಗರ ಶಿವಮೊಗ್ಗ ಟೌನ್ ಈತನಿಗೆ 11,000 ರೂ, ದಂಡ, 2) ಸೂಫಿಯಾನ್ ಖಾನ್, 21 ವರ್ಷ ಟ್ಯಾಂಕ್ ಮೊಹಲ್ಲಾ , ಶಿವಮೊಗ್ಗ ಟೌನ್ ಈತನಿಗೆ 8000 ರೂ ದಂಡ ಮತ್ತು ಬೈಕಿನ ಆರ್ ಸಿ ಮಾಲೀಕನಾದ 3) ಮೊಹಮ್ಮದ್ ಸೈಫುಲ್ಲಾ, 50 ವರ್ಷ, ಇಲಿಯಾಸ್ ನಗರ ಶಿವಮೊಗ್ಗ ಟೌನ್ ಈತನಿಗೆ 4500 ರೂ ದಂಡ ವಿಧಿಸಿ ಆದೇಶ ನೀಡಿರುತ್ತಾರೆ.

ಇನ್ನು ಮುಂದಾದರೂ ವೀಲಿಂಗ್ ಮಾಡುವ ಬೈಕ್ ಸವಾರರು ಎಚ್ಚೆತ್ತುಕೊಂಡು ತಮಗೂ ಸಾಮಾಜಿಕ ಜವಾಬ್ದಾರಿ ಇದೆ ಎಂದು ಅರಿತುಕೊಂಡು ಇದ್ದರೆ ಒಳಿತು.

ರಘುರಾಜ್ ಹೆಚ್‌. ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...