Saturday, June 14, 2025
Google search engine
Homeಬೆಳಗಾವಿವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ ..!ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ...

ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ ..!ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ನ್ಯಾಯಕ್ಕೆ ಸಂದ ಜಯ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್..!

ಸರ್ಕಾರಿ ಉದ್ಯೋಗಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ, 10 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ವಿಧೇಯಕವನ್ನು ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಿದೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರವಾಗಿ ಸಚಿವರಾ ದ ಪ್ರಿಯಾಂಕ ಖರ್ಗೆ ಅವರು, ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ-2023 ಅನ್ನು ಮಂಡಿಸಿದರು. ಪರೀಕ್ಷಾ ಅಕ್ರಮ ನಡೆಸಿದವರ ಸ್ವತ್ತು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹ ಅಪರಾಧಗಳ ವಿಚಾರಣೆಗಾಗಿ ನ್ಯಾಯಾಲಯಗಳನ್ನು ಸ್ಥಾಪಿಸಲು ವಿಧೇಯಕ ಅವಕಾಶ ಕಲ್ಪಿಸಲಿದೆ.

ಸ್ವಾಯತ್ತ ಸಂಸ್ಥೆಗಳು, ಪ್ರಾಧಿಕಾರಗಳು, ಮಂಡಳಿಗಳು ಅಥವಾ ನಿಗಮ ಒಳಗೊಂಡಂತೆ ರಾಜ್ಯ ಸರ್ಕಾರದ ಯಾವುದೇ ಹುದ್ದೆಗೆ ನೇಮಕಾತಿ ಉದ್ದೇಶಕ್ಕಾಗಿ ನಡೆಸಲಾಗುವ ಪಬ್ಲಿಕ್ ಪರೀಕ್ಷೆಗಳಲ್ಲಿ ಅನುಚಿತ ವಿಧಾನ ಬಳಸುವುದನ್ನು ಪ್ರತಿಬಂಧಿಸಲು ಮತ್ತು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಯಾವುದೇ ವ್ಯಕ್ತಿಯು ಅನುಚಿತ ವಿಧಾನದಲ್ಲಿ ತೊಡಗಿದರೆ ಆ ವ್ಯಕ್ತಿಗೆ 5 ವರ್ಷ ಹಾಗೂ ವಿಸ್ತರಿಸಬಹುದಾದ ಜೈಲು ಶಿಕ್ಷೆ ವಿಧಿಸಬಹುದು. ಪರೀಕ್ಷೆಯಲ್ಲಿ ಒಳಸಂಚು ಹಾಗೂ ನಿಯಮ ಉಲ್ಲಂಘಿಸಿದವರಿಗೆ 8 ವರ್ಷದಿಂದ 12 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 15 ಲಕ್ಷ ರೂ.ನಿಂದ 15 ಕೋಟಿ ರೂ.ವರೆಗೆ ದಂಡ ವಿಧಿಸಬಹುದು. ಇನ್ನು ಅಕ್ರಮ ಸಾಬೀತಾದರೆ ಆರೋಪಿಯಿಂದಲೇ ಪರೀಕ್ಷೆಗೆ ಸಂಬಂಧಪಟ್ಟ ಎಲ್ಲ ಖರ್ಚು ಮತ್ತು ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ.

ಕೆಪಿಎಸ್‌ಸಿ, ಕೆಇಎ, ಪ್ರಾಧಿಕಾರ ಹಾಗೂ ನೇಮಕಾತಿ ಸಮಿತಿಯ ಮೂಲಕ ನಡೆಸುವ ಪರೀಕ್ಷೆ, ವಿಶ್ವವಿದ್ಯಾಲಯ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಪಾಲ್ಗೊಂಡ ಯಾವುದೇ ಪ್ರಭಾವಿತ ವ್ಯಕ್ತಿಯಾದರೂ ಆತನಿಗೆ ಕಾನೂನಿನ ಮುಖಾಂತರ ಶಿಕ್ಷಿಸಲು ಒಂದು ಉತ್ತಮವಾದ ವಿಧೇಯಕವನ್ನು ಸರ್ಕಾರ ಮಂಡಿಸುವ ಮುಖಾಂತರ ಪ್ರತಿಭಾವಂತ ಲಕ್ಷಾಂತರ ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯವನ್ನು ಕೊಡಿಸುವಂತಹ ಕೆಲಸವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವಾಗಿದೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ ಪಿ ಗಿರೀಶ್ ಹರ್ಷ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!