Sunday, June 15, 2025
Google search engine
Homeರಾಜ್ಯBreaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!

Breaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!

ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಕಾಯ್ದೆಯನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ ಪಡೆದುಕೊಂಡಿದೆ.


ಕಾಯ್ದೆಯ ಪ್ರಮುಖ ಅಂಶಗಳು.

1)ಈ ಪ್ರಸ್ತಾಪಿತ ಕಾಯ್ದೆ ಪ್ರಕಾರ ವಕೀಲರ ಮೇಲೆ ಅಪರಾಧ ಎಸಗುವ ಪ್ರತಿಯೊಬ್ಬ ಅಪರಾಧಿಯು ಆರು ತಿಂಗಳಿನಿಂದ ಮೂರು ವರ್ಷದ ವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಅಥವಾ ಒಂದು ಲಕ್ಷ ರೂಪಾಯಿ ದಂಡನೆಗೆ ಒಳಗಾಗುತ್ತಾರೆ.

2) ಅಥವಾ‌ ಮೇಲಿನ ಎರಡನ್ನೂ ವಿಧಿಸಬಹುದಾದ ಶಿಕ್ಷೆಗೆ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು.

ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ವಕೀಲರ ಮೇಲೆ ಹಲ್ಲೆ, ದೌರ್ಜನ್ಯದಂತ ಅಪರಾಧಗಳು ನಡೆದರೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಅಂತಹ ವ್ಯಕ್ತಿಗಳನ್ನು ಈ ಕಾಯ್ದೆ ಪ್ರಕಾರ ವಿಚಾರಣೆ ಬಳಿಕ ದಂಡನೆಗೆ ಗುರಿಪಡಿಸಬಹುದು.

ಸಂಜ್ಞೇಯ ಅಪರಾಧಕ್ಕೆ ಸಂಬಂಧಿಸಿದಂತೆ ಯಾವುದೇ ವಕೀಲರನ್ನು ಪೊಲೀಸರು ಬಂಧಿಸಿದಾಗ ಅಂತಹ ಬಂಧನದ 24 ಗಂಟೆಯ ಒಳಗೆ ಆರೋಪಿತ ವಕೀಲರು ಸದಸ್ಯರಾಗಿರುವ ವಕೀಲರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಮಾಹಿತಿ ನೀಡತಕ್ಕದ್ದು.

ದಂಡನೀಯವಾದ ಪ್ರತಿಯೊಂದು ಅಪರಾಧವನ್ನು ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಗಳಿಗೆ ಕಡಿಮೆ ಇರದ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಎಂದು ಕಾಯ್ದೆಯಲ್ಲಿ ವಿಧಿಸಲಾಗಿದೆ.

ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣಾ ಕಾಯಿದೆ ಕೊನೆಗೂ ಜಾರಿಗೆ ಬಂದಿದ್ದು ಇನ್ನು ಮುಂದಾದರೂ ವಕೀಲರ  ಮೇಲೆ ಹಲ್ಲೆ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆ ಇದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!