
ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಎಸ್ ಷಡಾಕ್ಷರಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಷಡಾಕ್ಷರಿ ಅವರನ್ನು ಕೋಲಾರ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಈ ವರ್ಗಾವಣೆಯನ್ನು ಇಟ್ಟುಕೊಂಡು ರಾಜ್ಯ ಪರಿಷತ್ ಸದಸ್ಯರಾದ ಬಿ ಗಂಗಾಧರ್ ಅವರು ಷಡಾಕ್ಷರಿ ಕರ್ತವ್ಯಕ್ಕೆ ಹಾಜರ್ ಆಗುವವರೆಗೂ ಅವರ ಸದಸ್ಯತ್ವವನ್ನು ಅಮಾನತ್ತಿ ನಲ್ಲಿ ಇಡಬೇಕು ಎಂದು ಕೋರಿದ್ದರು.
ಇವರ ಕೋರಿಕೆಯ ಮೇರೆಗೆ ಷಡಾಕ್ಷರಿ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಲು ಬೈಲಾರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡುವಂತೆ ಸಹಕಾರ ಸಂಘಗಳ ಉಪನಿಂಬಂದಕರು ಜಿಲ್ಲಾ ನೋಂದಣಾಧಿಕಾರಿಗಳು ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ನೌಕರರ ಸಂಘದ ಕಾರ್ಯದರ್ಶಿ ಈ ನೋಟಿಸ್ ಗೆ ಏನು ಉತ್ತರ ನೀಡುತ್ತಾರೆ ಎನ್ನುವ ಕುತೂಹಲ ಎಡೆಮಾಡಿದೆ.
ರಘುರಾಜ್ ಹೆಚ್.ಕೆ.9449553305.