Sunday, June 15, 2025
Google search engine
Homeರಾಜ್ಯಭದ್ರಾವತಿ ಪೋಲಿಸರ ಭರ್ಜರಿ ಬೇಟೆ ಕಳುವಾಗಿದ್ದ 14 ಬೈಕ್ ಗಳ ವಶ..!

ಭದ್ರಾವತಿ ಪೋಲಿಸರ ಭರ್ಜರಿ ಬೇಟೆ ಕಳುವಾಗಿದ್ದ 14 ಬೈಕ್ ಗಳ ವಶ..!

ಭದ್ರಾವತಿ : ತಾಲೂಕಿನಲ್ಲಿ ವರದಿಯಾದ ವಾಹನ ಕಳವು ಪ್ರಕರಣಗಳಲ್ಲಿ ಆರೋಪಿ ಮತ್ತು ಕಳುವಾದ ಬೈಕ್ ಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಅನೀಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ,

ನಾಗರಾಜ ಪೊಲೀಸ್ ಉಪಾಧೀಕ್ಷರು ಭಧ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ಶ್ರೀಶೈಲ್ ಕುಮಾರ್* ಸಿಪಿಐ ನಗರ ವೃತ್ತ, ಜಗದೀಶ ಹಂಚಿನಾಳ್, ಪಿಐ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀಮತಿ ನಾಗಮ್ಮ ಪಿಐ ಪೇಪರ್ ಟೌನ್ ಠಾಣೆ, ಲಕ್ಷ್ಮಿಪತಿ ಪಿ. ಐ ಹೊಳೆಹೊನ್ನೂರು ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸುರೇಶ ಪಿ.ಎಸ್.ಐ ಹೊಳೆಹೊನ್ನೂರು, ರಮೇಶ ಪಿ.ಎಸ್.ಐ ನ್ಯೂ ಟೌನ್ ಪೊಲೀಸ್ ಠಾಣೆ, ಚಂದ್ರಶೇಖರ್ ಎ.ಎಸ್.ಐ, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳಾದ ಹೆಚ್.ಸಿ ನವೀನ್, ನ್ಯೂಟೌನ್ ಪೊಲೀಸ್ ಠಾಣೆ, ಚನ್ನಕೇಶವ, ಭದ್ರಾವತಿ ಹಳೇನಗರ ಪೊಲೀಸ್ ಠಾಣೆ, ನಾಗರಾಜ್, ಪೇಪರ್ ಟೌನ್ ಪೊಲೀಸ್ ಠಾಣೆ, ಪಿಸಿ ಆದರ್ಶ, ಹೊಸಮನೆ ಪೊಲೀಸ್ ಠಾಣೆ ರವರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ದಿನಾಂಕಃ 16-12-2023 ರಂದು ನ್ಯೂ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0209/2023 ಕಲಂ 379 ಐ.ಪಿ.ಸಿ ಪ್ರಕರಣದಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ 1) ಅಬ್ದುಲ್ ಕರೀಂ @ ಕರೀಂ @ ಮನ್ನಾ, 27 ವರ್ಷ, ಸಿದ್ದಾಫುರ ಹೊಸೂರು, ಭಧ್ರಾವತಿ ಮತ್ತು 2) ಅರ್ಷೀಲ್ ಪಾಷಾ @ ಹರ್ಷೀಲ್, 34 ವರ್ಷ, ಸಿದ್ದಾಫುರ ಹೊಸೂರು ಭದ್ರಾವತಿ ರವರನ್ನು ದಸ್ತಗಿರಿ ಮಾಡಿ ಆರೋಪಿತರಿಂದ ನ್ಯೂಟೌನ್ ಪೊಲೀಸ್ ಠಾಣೆಯ 7, ಹೊಸಮನೆ ಪೊಲೀಸ್ ಠಾಣೆಯ 2, ಪೇಪರ್ ಟೌನ್ ಪೊಲೀಸ್ ಠಾಣೆಯ 1, ದೊಡ್ಡಪೇಟೆ ಪೊಲೀಸ್ ಠಾಣೆಯ 1, ತರೀಕೆರೆ ಪೊಲೀಸ್ ಠಾಣೆಗೆ ಸೇರಿದ 1 ಪ್ರಕರಣ ಸೇರಿ ಒಟ್ಟು 12 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದ 12 ಬೈಕ್ ಗಳು ಹಾಗೂ ಕೃತ್ಯಕ್ಕೆ ಬಳಸಲಾದ 2 ಬೈಕ್ ಗಳು ಸೇರಿ ಅಂದಾಜು ಮೌಲ್ಯ 5,20,000/- ರೂಗಳ, 14 ಬೈಕ್ ಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!