Wednesday, April 30, 2025
Google search engine
Homeರಾಜ್ಯದುಷ್ಕರ್ಮಿಗಳನ್ನು ಮಟ್ಟಹಾಕಿ, ಸಣ್ಣಪುಟ್ಟ ರೌಡಿಗಳ ಮೇಲೆ ಹಾಕಿರುವ ಕೇಸುಗಳನ್ನು ಬಿಟ್ಟಾಕಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರಿಂದ...

ದುಷ್ಕರ್ಮಿಗಳನ್ನು ಮಟ್ಟಹಾಕಿ, ಸಣ್ಣಪುಟ್ಟ ರೌಡಿಗಳ ಮೇಲೆ ಹಾಕಿರುವ ಕೇಸುಗಳನ್ನು ಬಿಟ್ಟಾಕಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರಿಂದ ಪೊಲೀಸರಿಗೆ ಖಡಕ್ ಸೂಚನೆ…

ಬೆಂಗಳೂರು>>ಸಣ್ಣಪುಟ್ಟ ಘಟನೆಯಲ್ಲಿ ಭಾಗಿಯಾದವರನ್ನೂ ರೌಡಿಪಟ್ಟಿಗೆ ಸೇರಿಸಲಾಗಿದೆ. ಅವರೇನು ಸಮಾಜಘಾತುಕ ಕೆಲಸ ಮಾಡಿಲ್ಲ. ಕಾನೂನುಭಂಗ ಉಂಟು ಮಾಡಿಲ್ಲ. ಅಂತಹವರ ಮೇಲೆ ರೌಡಿಶೀಟರ್ ಓಪನ್ ಮಾಡಲಾಗಿದೆ. ಈ ರೀತಿಯಲ್ಲಿ ಸಾವಿರಾರು ರೌಡಿಗಳಿದ್ದಾರೆ.


ಇಂತಹವರನ್ನ ರೌಡಿ ಪಟ್ಟಿಯಿಂದ ಕೈ ಬಿಡಲು ಪೊಲೀಸ್ ಸಮಾವೇಶದಲ್ಲಿ ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, ಜಾನುವಾರು ಕಡಿಯುವ ಉದ್ದೇಶಕ್ಕೆ ಸಾಗಾಣೆ ಮಾಡುವುದಕ್ಕೆ ಇನ್ನು ಮುಂದೆ ಕಡಿವಾಣ ಹಾಕಲಾಗುವುದು. ಸಾಗಾಣೆ ಮಾಡದಂತೆ ತಡೆಗಟ್ಟಲಾಗುವುದು ಎಂದರು.

ಕ್ರೈಮ್ ಮೀಟಿಂಗ್ ಗಳು ಪ್ರತಿತಿಂಗಳು ನಡೆಸಬೇಕು. ಎಫ್​ಐಆರ್ ಹಾಕಿ ನಿಗಧಿತ ದಿನಗಳಲ್ಲಿ ಚಾರ್ಜ್ ಶೀಟ್ ಹಾಕುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಲಾಗಿದೆ. ಹಾಗೆಯೇ ಶಿಕ್ಷೆ ಪ್ರಮಾಣ ಹೆಚ್ಚುವಂತೆ ಮಾಡಬೇಕು. ಸ್ಪೋಟಕ ವಸ್ತು ತಯಾರಿಕೆ ಮತ್ತು ಸಾಗಾಣಿಕೆ ನಿಗಾ ವಹಿಸಬೇಕು. ಲಾಜಿಕಲ್ ಎಂಡ್ ಗೆ ಹೋಗಬೇಕು. ಸಮಾಜ ವಿದ್ರೋಹಿ ಕೈಗಳಿಗೆ ಸಿಗದಂತೆ ತಡೆದು ಮಟ್ಟ ಹಾಕಬೇಕು. ಪೊಲೀಸ್ ಬೀಟ್ ಸಿಸ್ಟಂ ಬಲಪಡಿಸಬೇಕು. ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಬೀಟ್ ಪರಿಣಾಮಕಾರಿಯಾಗುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್ ಐ ಎ ಘಟಕ ಬೆಂಗಳೂರು ಅಥವಾ ಮಂಗಳೂರಿನಲ್ಲಿ ತೆರೆಯಲು ಕೇಂದ್ರಕ್ಕೆ ಶಿಫಾರಸು ಮಾಡ್ತೇವೆ. ವಿದೇಶಿಗರು ರಾಜ್ಯದಲ್ಲಿ ಹಲವರು ಮಂದಿ ಅನಧಿಕೃತವಾಗಿ ನೆಲೆಸಿದ್ದಾರೆ. ಡ್ರಗ್ಸ್ ಹಾಗೂ ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗ್ತಿದ್ದಾರೆ. ವೀಸಾ ಅವಧಿ, ಎಲ್ಲಿಯವರು, ಏನು ಕೆಲಸ ಮಾಡ್ತಾರೆ ಎಲ್ಲವನ್ನು ಸರ್ವೆ ಮಾಡಲು ತೀರ್ಮಾನ ಮಾಡಿದ್ದೇವೆ. ಅವಧಿಬದ್ಧವಾಗಿ ಸರ್ವೆ ಮಾಡಲು ಸೂಚಿಸಿದ್ದೇವೆ. ಆಘ್ಘಾನ್ ರಾಜಕೀಯ ವ್ಯತ್ಯಾಸದ ಬಳಿಕ ಅಕ್ರಮ ವಿದೇಶಿಗರ ಬಗ್ಗೆ ಮಾಹಿತಿ ಕಲೆ ಹಾಕಲು ಹೇಳಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಸಣ್ಣಪುಟ್ಟ ಘಟನೆಯಲ್ಲಿ ಭಾಗಿಯಾದವರನ್ನೂ ರೌಡಿಪಟ್ಟಿಗೆ ಸೇರಿಸಲಾಗಿದೆ. ಅವರೇನು ಸಮಾಜಘಾತುಕ ಕೆಲಸ ಮಾಡಿಲ್ಲ. ಕಾನೂನುಭಂಗ ಉಂಟು ಮಾಡಿಲ್ಲ. ಅಂತಹವರ ಮೇಲೆ ರೌಡಿಶೀಟರ್ ಓಪನ್ ಮಾಡಲಾಗಿದೆ. ಈ ರೀತಿಯಲ್ಲಿ ಸಾವಿರಾರು ರೌಡಿಗಳಿದ್ದಾರೆ. ಇಂತಹವರನ್ನ ರೌಡಿ ಪಟ್ಟಿಯಿಂದ ಕೈ ಬಿಡಲಾಗುವುದು. ಅನೇಕ ಮಾನದಂಡ ಇಟ್ಟು ರೌಡಿ ಶೀಟರ್ ಪಟ್ಟಿ ಪರಾಮರ್ಶೆ ಮಾಡುತ್ತೇವೆ.


ಹೀಗಾಗಿ ರೌಡಿಶೀಟರ್ ಪಟ್ಟಿಯನ್ನು ಪರಾಮರ್ಶೆ ಮಾಡುವುದಕ್ಕೆ ನಿಯಮಾವಳಿ ಅಡಿಯಲ್ಲಿ ಅವಕಾಶವಿದೆ. ರಾಜ್ಯದಾದ್ಯಂತ ಸಣ್ಣಪುಟ್ಟ ಚಳುವಳಿಗಾರರ ಮೇಲೆ ರೌಡಿಶಿಟ್ ಹಣೆ ಪಟ್ಟಿ ಕಟ್ಡಿದ್ದಾರೆ. ಇದರಲ್ಲಿ ಯಾವುದೇ ಬೇರೆ ಉದ್ದೇಶ ಇಲ್ಲ. ಜೊತೆಗೆ ರಾಜಕೀಯ ಕಾರಣಕ್ಕೂ ನಾವು ಹೀಗೆ ಮಾಡ್ತಿಲ್ಲ. ಇದನ್ನುನಿಗದಿತ ದಿನಾಂಕದೊಳಗೆ ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಬೇಕು ಎಂದರು.

ಕರಾವಳಿ ಪ್ರದೇಶದಲ್ಲಿ ತುಂಬಾ ವಿಚಿತ್ರಕಾರಕ ಶಕ್ತಿಗಳು ತಲೆ ಎತ್ತುವ ಸ್ಥಿತಿ ಇದೆ. ಗೋವಾದಿಂದ ಕೇರಳ ಬಾರ್ಡರ್ ವರೆಗೆ ಮೀನುಗಾರರ ವೇಷದಲ್ಲಿ ಬಂದು ಬಾಂಬೆಯಲ್ಲಿ ನಡೆಸಿದ ಕೃತ್ಯ ಎಲ್ಲರಿಗೂ ಗೊತ್ತಿದೆ. ಕರಾವಳಿ ಕಾವಲು ಪಡೆ ಇನ್ನಷ್ಡು ಬಲಗೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ. ಕರಾವಳಿ ಕಾವಲು ಪಡೆಗೆ ಇನ್ನಷ್ಟು ಸ್ಪೀಡ್ ಬೋಟ್​ ಗಳನ್ನು ಒದಗಿಸಲು ಸಿದ್ದರಾಗಿದ್ದೇವೆ. ದೇಶ ವಿರೋಧಿ ಕೃತ್ಯ, ದಂಧೆ ನಡೆಸುವವರ ಮೇಲೆ ಕಣ್ಗಾವಲು ಇಡಲು ಹೇಳಿದ್ದೇವೆ. ಪಟ್ಟಣ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥಿತ ಭಂಗ ಮಾಡುವ ರೌಡಿ ಪಡೆಗಳನ್ನು ಮೆಟ್ಟಿ ನಿಲ್ಲಬೇಕು ಅಂತ ಹೇಳಿದ್ದೇವೆ. ಜನರ ನೆಮ್ಮದಿ ಬದುಕಿಗೆ ತೊಂದರೆ ಉಂಟು ಮಾಡುವ ದುಷ್ಕರ್ಮಿಗಳನ್ನು ಮಟ್ಡ ಹಾಕಲು ಸೂಚಿಸಿದ್ದೇವೆ ಎಂದರು.

ಬೆಂಗಳೂರು ನಗರದಲ್ಲಿ ಅಕ್ರಮ ಕ್ಯಾಸಿನೋಗಳು ಹೆಚ್ಚಾಗಿದ್ದು, ಎಲ್ಲೆಲ್ಲಿ ಅಕ್ರಮ ಕ್ಯಾಸಿನೋ ಕ್ಲಬ್ ಮಟ್ಕಾ ನಡೆಯುತ್ತಿದೆ. ಆಯಾ ಸ್ಟೇಷನ್ ಪೊಲೀಸ್ ಅಧಿಕಾರಿಗಳನ್ನೇ ಹೊಣೆ ಮಾಡ್ತೀವಿ. ಅಕ್ರಮ ತಡೆಯದಿದ್ದರೆ ಅಂಥ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡ್ತೀವಿ ಎಂದು ಹೇಳಿದರು.

ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ದುಷ್ಕರ್ಮಿಗಳನ್ನು ಸದೆಬಡಿಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಸೂಚಿಸಲಾಗಿದೆ. ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು…

ವರದಿ …ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...