Monday, June 16, 2025
Google search engine
Homeಶಿವಮೊಗ್ಗZilla Panchayat:ಬಿದರಗೋಡು ಗ್ರಾಮ ಪಂಚಾಯಿತಿಯ ಗ್ರಾಮಸಭೆ ಬಹಿಷ್ಕಾರ ಅಧಿಕಾರಿಗಳ ದಿವ್ಯ ನಿರ್ಲಕ್ಷ ಬಹಿಷ್ಕಾರಕ್ಕೆ ಕಾರಣವಾಯಿತೇ..?

Zilla Panchayat:ಬಿದರಗೋಡು ಗ್ರಾಮ ಪಂಚಾಯಿತಿಯ ಗ್ರಾಮಸಭೆ ಬಹಿಷ್ಕಾರ ಅಧಿಕಾರಿಗಳ ದಿವ್ಯ ನಿರ್ಲಕ್ಷ ಬಹಿಷ್ಕಾರಕ್ಕೆ ಕಾರಣವಾಯಿತೇ..?

ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಧಿಕಾರ ವಿಕೇಂದ್ರಿಕರಣವಾಗಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಸಲುವಾಗಿ ಗ್ರಾಮ ಪಂಚಾಯತ್ ಎನ್ನುವ ಪರಿಕಲ್ಪನೆಯನ್ನು ಜಾರಿಗೆ ತರಲಾಯಿತು.

ಇದು ಸಾಕಷ್ಟು ಪ್ರಭಾವ ಬೀರಿತು ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದ್ದು ಗ್ರಾಮೀಣ ಭಾಗದ ಜನರಿಗೆ ಗ್ರಾಮ ಪಂಚಾಯಿತಿಯೇ ವಿಧಾನಸೌಧ ಎಂದರೆ ತಪ್ಪಾಗಲಾರದು .

ಆದರೆ ಈ ಗ್ರಾಮೀಣ ಭಾಗದ ವಿಧಾನಸೌಧಕ್ಕೆ ಗ್ರಾಮ ಸಭೆ ನಡೆಯುವ ಸಂದರ್ಭದಲ್ಲಿ ಎಲ್ಲಾ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬರಬೇಕು ಅಲ್ಲಿಯ ಜನರ ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಸಮಸ್ಯೆಗಳನ್ನು ಕೇಳಬೇಕು ಆ ಸಮಸ್ಯೆಗಳಿಗೆ ಪರಿಹಾರಗಳನ್ನು ಸೂಚಿಸಬೇಕು ಎನ್ನುವ ಒಂದು ಚೌಕಟ್ಟಿದೆ ಆದರೆ ಇತ್ತೀಚಿನ ದಿನಗಳಲ್ಲಿ ಗ್ರಾಮ ಸಭೆ ಎಂದರೆ ಕೆಲವು ಅಧಿಕಾರಿಗಳಿಗೆ ದಿವ್ಯ ನಿರ್ಲಕ್ಷ ಉಂಟಾಗಿದೆ.

ಗ್ರಾಮ ಸಭೆಗೆ ಸಾಮಾನ್ಯವಾಗಿ 25 ರಿಂದ 30 ಇಲಾಖೆಗಳ ಅಧಿಕಾರಿಗಳು ಬರಬೇಕು ಆದರೆ ಕೆಲವೊಂದು ಇಲಾಖೆಯ ಅಧಿಕಾರಿಗಳು ಮಾತ್ರ ಗ್ರಾಮ ಸಭೆಗೆ ಹಾಜರಿರುತ್ತಾರೆ ಆದರೆ ಕೆಲವು ಅಧಿಕಾರಿಗಳು ಬರುವುದೇ ಇಲ್ಲ ಎನ್ನುವ ದೂರುಗಳು ಗ್ರಾಮೀಣ ಭಾಗದ ಸಾರ್ವಜನಿಕರದ್ದು ಹಾಗೂ ಜನಪ್ರತಿನಿಧಿಗಳದ್ದು ಇದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ ಉತ್ತರ ನೀಡಬೇಕು .

ಇನ್ನು ಮುಂದೆ ಈಗಾಗದಂತೆ ಎಚ್ಚರ ವಹಿಸಬೇಕು ಎಲ್ಲಾ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಕಡ್ಡಾಯವಾಗಿ ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಇಲ್ಲವಾದರೆ ಕಳೆದ ಗ್ರಾಮ ಸಭೆಯಲ್ಲಿ ಬಿದರಗೋಡು ಗ್ರಾಮ ಪಂಚಾಯಿತಿಗೆ ನೂಡಲ್ ಆಫೀಸರ್ ಬಂದಿಲ್ಲ ಎಂದು ಗ್ರಾಮ ಸಭೆಯನ್ನೇ ಬಹಿಷ್ಕಾರ ಮಾಡಿದ್ದರು ಇದು ಪುನರಾವರ್ತನೆ ಆಗಬಾರದು ಆ ದೃಷ್ಟಿಯಿಂದ ಮತ್ತೆ ಇದು ಮರುಕಳಿಸದಂತೆ ಎಚ್ಚರ ವಹಿಸಬೇಕು.

ರಘುರಾಜ್ ಹೆಚ್‌.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!