Wednesday, April 30, 2025
Google search engine
Homeರಾಜ್ಯElection alert:ಮತದಾನ ಪ್ರಕ್ರಿಯೆಯಲ್ಲಿ "ನಗರ ವಾಸಿಗಳ ನಿರಾಸಕ್ತಿ" ..!

Election alert:ಮತದಾನ ಪ್ರಕ್ರಿಯೆಯಲ್ಲಿ “ನಗರ ವಾಸಿಗಳ ನಿರಾಸಕ್ತಿ” ..!

ವಿಷಯ: “ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ” (Urban apathy) ವಿಷಯದ ಕುರಿತು ಕಿರುಚಿತ್ರ (Short Video) ವನ್ನು ಚಿತ್ರೀಕರಣಕ್ಕೆ ಅವಕಾಶ.

ಕಳೆದ ಬಾರಿಯ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ- 2023 ರ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣವು ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗಳ ವಿಧಾನ ಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ದಾಖಲಾಗಿರುವುದು ಕಂಡುಬರುತ್ತದೆ.

ಈ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗವು ವಿಶೇಷವಾಗಿ ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿಗೆ (Urban apathy) ಕಾರಣ ಹಾಗೂ ನಗರ ಪ್ರದೇಶಗಳ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಒಂದು ನಿಮಿಷದೊಳಗಿನ ಕಿರುಚಿತ್ರ (Short Video) ಚಿತ್ರೀಕರಿಸಲು ತೀರ್ಮಾನಿಸಿರುತ್ತದೆ.

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿರುವ ಶಾಲಾ/ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಸಂಘಗಳ ಮುಖೇನ, ಎಲ್ಲಾ ಸಾರ್ವಜನಿಕರು ಮುಕ್ತವಾಗಿ ದಿನಾಂಕ: 10.01.2024 ರೊಳಗಾಗಿ ಭಾಗವಹಿಸಿ ವಿಡಿಯೋ ಚಿತ್ರೀಕರಿಸಿ ಸಲ್ಲಿಸುವಂತೆ ಹಾಗೂ ಪ್ರತಿ ಜಿಲ್ಲೆಯಿಂದ ಪ್ರಥಮ ಮತ್ತು ದ್ವಿತೀಯ, ತೃತೀಯ ಸ್ಥಾನ ಪಡೆದ ಕಿರುಚಿತ್ರ (Short Video) ಗಳಿಗೆ ಈ ಕೆಳಕಂಡಂತೆ

1)ಪ್ರಥಮ ಸ್ಥಾನ Rs 5,000/-

2)ದ್ವಿತೀಯ ಸ್ಥಾನ Rs 3,000/-

3)ತೃತೀಯ ಸ್ಥಾನ Rs 2,000/-

ನಗದು ಬಹುಮಾನ ಘೋಷಿಸಿ, ರಾಷ್ಟ್ರೀಯ ಮತದಾರರ ದಿನಾಚರಣೆ-2024 ರ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಂದ ಪ್ರಮಾಣ ಪತ್ರ ವಿತರಿಸಲು ಕ್ರಮ ವಹಿಸುವಂತೆ,-ಅಪರ ಮುಖ್ಯ ಚುನಾವಣಾಧಿಕಾರಿ ಸಿ.ಆ.ಸು.ಇಲಾಖೆ (ಚುನಾವಣೆಗಳು), ಬೆಂಗಳೂರು ಪತ್ರಿಕಾ ಪ್ರಕಟಣೆ ಮೂಲಕ ಜಾಗೃತಿ ಮೂಡಿಸುವಂತೆ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...