Wednesday, April 30, 2025
Google search engine
Homeರಾಜ್ಯBig news:ಸಚಿವ ಮಧು ಬಂಗಾರಪ್ಪಗೆ ದಂಡ ಕಟ್ಟದಿದ್ದರೆ ಜೈಲು ಶಿಕ್ಷೆ..!ಏನಿದು ಜನಪ್ರತಿನಿಧಿಗಳ ವಿಶೇಷ...

Big news:ಸಚಿವ ಮಧು ಬಂಗಾರಪ್ಪಗೆ ದಂಡ ಕಟ್ಟದಿದ್ದರೆ ಜೈಲು ಶಿಕ್ಷೆ..!ಏನಿದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು..!

ಬೆಂಗಳೂರು:ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆ.

ಏನಿದು ಪ್ರಕರಣ:

2011ರ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆಯಲ್ಲದೆ, ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ 6 ತಿಂಗಳು ಜೈಲುವಾಸದ ಶಿಕ್ಷೆಯನ್ನು ನೀಡಿ ಆದೇಶಿಸಿದೆ ‌

ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.60 ಕೋಟಿ ರೂಪಾಯಿ ಮೌಲ್ಯದ ಚಕ್ ಒಂದನ್ನು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ನೀಡಿದ್ದರು. ಆದರೆ ಚೆಕ್‌ಬೌನ್ಸ್‌ ಆಗಿತ್ತು. ವಿಚಾರಣೆ ಮಾಡಿದರೆ ಮಧು ಬಂಗಾರಪ್ಪ ಉಡಾಫೆಯಾಗಿ ವರ್ತಿಸಿದ ಹಿನ್ನಲೆಯಲ್ಲಿ ಚೆಕ್‌ಬೌನ್ಸ್‌ ಪ್ರಕರಣವನ್ನು ದಾಖಲು ಮಾಡಲಾಗಿತ್ತು.

ಈ ಪ್ರಕರಣದ ಅರ್ಜಿಯನ್ನು ವಿಚಾರಣೆ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6,96,70,000 ರೂ. (6.96 ಕೋಟಿ ರೂ.) ದಂಡವನ್ನು ವಿಧಿಸಿದೆ.

ಆದರೆ ಜ.30 ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ‌ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಚ್ಚಳಿಕೆ ಒಪ್ಪಲು ನಿರಾಕರಿಸಿತ್ತು.

ಯಾಕೆಂದರೆ ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ ಎಂದು ಮಾನ್ಯ ನ್ಯಾಯಾಧೀಶರಾದ ಜೆ.ಪ್ರೀತ್ ಮನವಿ ತಿರಸ್ಕರಿಸಿ ಆದೇಶ ಹೊರಡಿಸಿದ್ದರು.


ದಂಡದ ಹಣದಲ್ಲಿ 6,96,60,000 ರೂ. ಹಣವನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು ಮತ್ತು ಉಳಿದ 10 ಸಾವಿರ ರೂ. ಹಣವನ್ನು ಸರ್ಕಾರಕ್ಕೆ ದಂಡವಾಗಿ ಪಾವತಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...