
ತೀರ್ಥಹಳ್ಳಿ: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ಸ್ನೇಹಜೀವಿ ಆಗಿದ್ದ ಕಡ್ತೂರ್ ಶ್ರೀನಿವಾಸ್ ಅವರು ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗಿದೆ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಕೊನೆ ಉಸಿರು ಎಳೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಶ್ರೀನಿವಾಸ್ ಅವರು ತೀರ್ಥಹಳ್ಳಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದು ಸಂಘದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು ಅವರ ನಿಧನ ಸಮುದಾಯಕ್ಕೆ ಹಾಗೂ ತಾಲೂಕಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಅವರ ಸಮೀಪ ವರ್ತಿಗಳು ವಿಷಾದ ವ್ಯಕ್ತಪಡಿಸಿದ್ದಾರೆ.
ಮೃತರ ದೇಹವು ಕಮ್ಮರಡಿ ಸಮೀಪ ಕಡ್ತೂರ್ ನಲ್ಲಿ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.