Wednesday, April 30, 2025
Google search engine
Homeಶಿವಮೊಗ್ಗಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!

ಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!

ಶಿವಮೊಗ್ಗ: ಸುಗಮ ಸಂಗೀತ ಕ್ಷೇತ್ರದ ಸಾಹಿತ್ಯ ಲೋಕದಲ್ಲಿ ನಾಡಿನ ಸುಪ್ರಸಿದ್ದ ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಕೊಡುಗೆ ಅಪಾರ. ಅವರ ಪ್ರತಿಯೊಂದು ಕವನಗಳು ನಾಡಿನ ಜನಮಾನಸವನ್ನು ಗೆದ್ದಿದೆ ಎಂದು ಪಿ.ಕಾಳಿಂಗರಾವ್ ಮೊಮ್ಮಗ, ಹಿನ್ನಲೆ ಗಾಯಕ, ನಟ ರಾಜೇಶ್ ಶಾನಭಾಗ್ ಅಭಿಪ್ರಾಯಪಟ್ಟರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ನಾಡಿನ ಸುಪ್ರಸಿದ್ಧ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಅವರ ರಚನೆಯ ಗೀತ ಗಾಯನ “ಗಾನ ಮಲ್ಲಿಗೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲ ವಯಸ್ಸಿನ ಕೇಳುಗರಿಗೆ ಕವನಗಳು ತಲುಪಿವೆ. ಹಾಡುವುದಕ್ಕೂ ತುಂಬಾ ಸಂತೋಷ ನೀಡಬಲ್ಲ ಸಾಹಿತ್ಯ ಎಂದು ತಿಳಿಸಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಎಸ್.ಶೆಟ್ಟಿ ಮಾತನಾಡಿ, ನಾಡಿನಲ್ಲಿ ವಿಶೇಷ ಸಾಧನೆ ಮಾಡಿದ ಕವಿಗಳ ತಂಡ ಇದ್ದು, ರಚನೆಗಳ ಕೇಳುವ ಜತೆಯಲ್ಲಿ ಅಭ್ಯಾಸ ಮಾಡಬೇಕು. ಉತ್ತಮ ಗಾಯಕರಾಗಬೇಕು ಎಂದು ಹೇಳಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಕೋಶಾಧ್ಯಕ್ಷ ಜಿ.ವಿಜಯಕುಮಾರ ಮಾತನಾಡಿ, ಮಕ್ಕಳು ರಿಯಾಲಿಟಿ ಶೋ, ಕಡಿಮೆ ಸಮಯದಲ್ಲಿ ಗಾಯಕರಾಗಬೇಕು ಎಂಬ ಆತುರ ತೋರದೇ ತಾಳ್ಮೆಯಿಂದ ಅಭ್ಯಾಸ ನಡೆಸಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರೋಟರಿ ಸಂಸ್ಥೆಯು ಸೇವಾ ಕಾರ್ಯಗಳ ಜತೆಯಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಜೇಶ್ ಶಾನಭಾಗ್ ಅವರನ್ನು ಸನ್ಮಾನಿಸಲಾಯಿತು.
ಕವಿ ಕೆ.ಎಸ್.ಎನ್. ಗೀತೆಗಳನ್ನು ಹಾಡಿ ನುಡಿ ನಮನ ಅರ್ಪಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರಕುಮಾರ್, ಮಂಜುನಾಥ್.ಕೆ.ಎಸ್., ಭದ್ರಾವತಿ ವಾಸು, ಜಾನಪದ ಕಲಾವಿದ ಕೆ.ಯುವರಾಜ್, ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...