Sunday, June 15, 2025
Google search engine
Homeಶಿವಮೊಗ್ಗಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!

ಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!

ಶಿವಮೊಗ್ಗ: ಸುಗಮ ಸಂಗೀತ ಕ್ಷೇತ್ರದ ಸಾಹಿತ್ಯ ಲೋಕದಲ್ಲಿ ನಾಡಿನ ಸುಪ್ರಸಿದ್ದ ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಕೊಡುಗೆ ಅಪಾರ. ಅವರ ಪ್ರತಿಯೊಂದು ಕವನಗಳು ನಾಡಿನ ಜನಮಾನಸವನ್ನು ಗೆದ್ದಿದೆ ಎಂದು ಪಿ.ಕಾಳಿಂಗರಾವ್ ಮೊಮ್ಮಗ, ಹಿನ್ನಲೆ ಗಾಯಕ, ನಟ ರಾಜೇಶ್ ಶಾನಭಾಗ್ ಅಭಿಪ್ರಾಯಪಟ್ಟರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ನಾಡಿನ ಸುಪ್ರಸಿದ್ಧ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಅವರ ರಚನೆಯ ಗೀತ ಗಾಯನ “ಗಾನ ಮಲ್ಲಿಗೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲ ವಯಸ್ಸಿನ ಕೇಳುಗರಿಗೆ ಕವನಗಳು ತಲುಪಿವೆ. ಹಾಡುವುದಕ್ಕೂ ತುಂಬಾ ಸಂತೋಷ ನೀಡಬಲ್ಲ ಸಾಹಿತ್ಯ ಎಂದು ತಿಳಿಸಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಎಸ್.ಶೆಟ್ಟಿ ಮಾತನಾಡಿ, ನಾಡಿನಲ್ಲಿ ವಿಶೇಷ ಸಾಧನೆ ಮಾಡಿದ ಕವಿಗಳ ತಂಡ ಇದ್ದು, ರಚನೆಗಳ ಕೇಳುವ ಜತೆಯಲ್ಲಿ ಅಭ್ಯಾಸ ಮಾಡಬೇಕು. ಉತ್ತಮ ಗಾಯಕರಾಗಬೇಕು ಎಂದು ಹೇಳಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಕೋಶಾಧ್ಯಕ್ಷ ಜಿ.ವಿಜಯಕುಮಾರ ಮಾತನಾಡಿ, ಮಕ್ಕಳು ರಿಯಾಲಿಟಿ ಶೋ, ಕಡಿಮೆ ಸಮಯದಲ್ಲಿ ಗಾಯಕರಾಗಬೇಕು ಎಂಬ ಆತುರ ತೋರದೇ ತಾಳ್ಮೆಯಿಂದ ಅಭ್ಯಾಸ ನಡೆಸಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರೋಟರಿ ಸಂಸ್ಥೆಯು ಸೇವಾ ಕಾರ್ಯಗಳ ಜತೆಯಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಜೇಶ್ ಶಾನಭಾಗ್ ಅವರನ್ನು ಸನ್ಮಾನಿಸಲಾಯಿತು.
ಕವಿ ಕೆ.ಎಸ್.ಎನ್. ಗೀತೆಗಳನ್ನು ಹಾಡಿ ನುಡಿ ನಮನ ಅರ್ಪಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರಕುಮಾರ್, ಮಂಜುನಾಥ್.ಕೆ.ಎಸ್., ಭದ್ರಾವತಿ ವಾಸು, ಜಾನಪದ ಕಲಾವಿದ ಕೆ.ಯುವರಾಜ್, ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!