Wednesday, April 30, 2025
Google search engine
Homeಶಿವಮೊಗ್ಗಗಾಂಜಾ ವಿರುದ್ಧ ಸಮರ‌ ಸಾರಿದ ಶಿವಮೊಗ್ಗ ಪೋಲಿಸ್:ಯಾಸಿರ್ ಪಾಷಾನಿಗೆ‌ 4 ವರ್ಷ ಕಠಿಣ ಕಾರವಾಸ 20...

ಗಾಂಜಾ ವಿರುದ್ಧ ಸಮರ‌ ಸಾರಿದ ಶಿವಮೊಗ್ಗ ಪೋಲಿಸ್:ಯಾಸಿರ್ ಪಾಷಾನಿಗೆ‌ 4 ವರ್ಷ ಕಠಿಣ ಕಾರವಾಸ 20 ಸಾವಿರ ರೂ ದಂಡ ವಿಧಿಸಿದ ಘನ ನ್ಯಾಯಾಲಯ..!

ಶಿಕಾರಿಪುರ: ತಾಲೂಕಿನ ಕುಂಬಾರ ಗುಂಡಿಯ ವಾಸಿ ಯಾಸಿರ್ ಪಾಷಾ ಎನ್ನುವ ವ್ಯಕ್ತಿ ಸಾರ್ವಜನಿಕರಿಗೆ ಗಾಂಜಾ ಮಾದಕ ವಸ್ತು ಮಾರಾಟ ಮಾಡಲು ತನ್ನ ಸ್ಕೂಟಿಯನ್ನು ಬಳಸುತ್ತಿದ್ದನು ಈ ಸಮಯದಲ್ಲಿ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರದ ಐಪಿಎಸ್ ಶ್ರೀನಿವಾಸಲು ಅಡ್ಡೂರ್, ಎಎಸ್ಪಿ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದಾಗ ಮಾದಕ ವಸ್ತುವನ್ನು ವ್ಯಾಪಾರ ಮಾಡುತ್ತಿದ್ದ ಯಾಸೀರ್ ಪಾಷಾನನ್ನು ದಸ್ತಗಿರಿ ಮಾಡಿ ಆತನಿಂದ ಒಂದು ಕೆಜಿ 148 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಂಡು ಆತನ ವಿರುದ್ಧ. ಗುನ್ನೆ ಸಂಖ್ಯೆ 00052/2020 ಕಲಂ 8(ಸಿ), 20(ಬಿ)(2) ಎನ್.ಡಿ.ಪಿ.ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾದ ಬೂದ್ಯಪ್ಪ ಎಎಸ್ಐ ರವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ. ಸುರೇಶ್ ಕುಮಾರ್ ಸರ್ಕಾರಿ ಅಭಿಯೋಜಕರವರು ಪ್ರಕರಣದ ಪರವಾಗಿ ಘನ ನ್ಯಾಯಾಲಯದಲ್ಲಿ ವಾದಮಂಡಿಸಿದ್ದು, ಮಾನ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ ದಲ್ಲಿ ಪ್ರಕರಣದ ವಾದ ನಡೆದು ಆರೋಪಿ ಯಾಸೀರ್ ಪಾಷಾ 28 ವರ್ಷ, ಶಿಕಾರಿಪುರ ಟೌನ್ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರಿ ಮಂಜುನಾಥ್ ನಾಯಕ್,ರವರು ದಿನಾಂಕಃ 02-02-2024 ರಂದು ಆರೋಪಿಗೆ 04 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಸಿರುತ್ತಾರೆ.

ಶಿವಮೊಗ್ಗ ಪೊಲೀಸರು ಗಾಂಜಾ ವಿರುದ್ಧ ಸಮರ ಸಾರಿದ್ದು ಈಗ ಘನ ನ್ಯಾಯಾಲಯ ಶಿಕ್ಷೆಯನ್ನು ವಿಧಿಸುತ್ತಿದ್ದು ಈ ಕೃತ್ಯವನ್ನು ಮಾಡುವವರಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...