
ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕು ಗಡೆಕಟ್ಟೆ ಮತ್ತು ಕುಗನಹಳ್ಳಿ ತಾಂಡಕ್ಕೆ ಸೇರಿದ ಕೆರೆ ಒಂದರಲ್ಲಿ ಅಕ್ರಮ ಮಣ್ಣುಗಾರಿಕೆ ನಡೆಯುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳಿಗೂ ಗೊತ್ತಿದ್ದು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ನಿರಂತರವಾಗಿ ಕೆರೆಯಲ್ಲಿ ಮಣ್ಣು ಲೂಟಿಯಾಗುತ್ತಿದ್ದು ಈ ಮಣ್ಣನ್ನು ಲೂಟಿ ಮಾಡುತ್ತಿರುವರ ವಿರುದ್ಧ ಹಾಗೂ ಆ ಕಾರ್ಯನಿರ್ವಹಿಸುವ ವಾಹನಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಂದಾಯ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಲ್ಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.