Wednesday, April 30, 2025
Google search engine
Homeಶಿವಮೊಗ್ಗಮಕ್ಕಳ ಯಶಸ್ಸಿನಲ್ಲಿ ಪಾಲಕರ ಸಂತೋಷ..!

ಮಕ್ಕಳ ಯಶಸ್ಸಿನಲ್ಲಿ ಪಾಲಕರ ಸಂತೋಷ..!

ಶಿವಮೊಗ್ಗ: ಮಕ್ಕಳು ಕರ್ತವ್ಯದಲ್ಲಿ ಯಶಸ್ಸು ಗಳಿಸಿ ಪುರಸ್ಕರ ಹೊಂದಿದಾಗ ಪಾಲP್ಪರಿಗೆ ಆಗುವ ಸಂತೋಷ ವರ್ಣಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಪಾಲಕರಿಗೆ ವಿಶೇಷ ಗೌರವವನ್ನು ತಂದುಕೊಡುತ್ತದೆ ಎಂದು ಹಿರಿಯ ವಕೀಲ ಎಸ್.ಟಿ.ರಂಗನಾಥ್ ಅಭಿಪ್ರಾಯಪಟ್ಟರು.
ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಬಂಗಾರದ ಪದಕ ವಿಜೇತೆ ಸಾತ್ವಿಕ. ಸಿ. ಸಿ. ಅವರನ್ನು ಶಿವಮೊಗ್ಗದಲ್ಲಿ ಯೂತ್ ಹಾಸ್ಟೆಲ್ ತರುಣೋದಯ ಘಟಕದ ವತಿಯಿಂದ ಸನ್ಮಾನಿಸಿ ಮಾತನಾಡಿದರು.
ತರುಣೋದಯ ಘಟಕದ ಸಂಸ್ಥಾಪಕ ವಕೀಲ ಚಂದ್ರಶೇಖರ್ ಮತ್ತು ಪೂರ್ಣಿಮ ದಂಪತಿಯ ಪುತ್ರಿಯಾದ ಇವರು ಪೋಷಕರೊಂದಿಗೆ ನಮ್ಮ ನಗರಕ್ಕೂ ಹೆಸರು ತಂದಿದ್ದಾರೆ. ಉತ್ತಮ ವೈದ್ಯೆಯಾಗಿ ಸಮಾಜಕ್ಕೆ ಆಸ್ಥಿಯಾಗಲಿ, ಯಶಸ್ಸು ಗಳಿಸಿದ ಸದಸ್ಯರನ್ನು ಗೌರವಿಸುವುದು ಅವರಿಗೆ ಉತ್ತೇಜನ ದೊರೆತು ಇನ್ನೂ ಹೆಚ್ಚಿನ ಜವಾಬ್ದಾರಿ ಹೊಂದಲು ಸಹಕಾರಿ ಎಂದರು.
ಮಕ್ಕಳಿಗೆ ಬಾಲ್ಯದಿಂದಲೇ ಸೂಕ್ತ ಮಾರ್ಗದರ್ಶನ ನೀಡಿ ಬೆಳೆಸಬೇಕು. ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿ ಸಲಹೆ ನೀಡಬೇಕು. ಸಮಾಜದಲ್ಲಿ ಉನ್ನತ ಸ್ಥಾನ ತಲುಪುವ ಜತೆಯಲ್ಲಿ ಸೇವೆ ಮಾಡುವ ಮನೋಭಾವ ಬೆಳೆಸಬೇಕು ಎಂದು ತಿಳಿಸಿದರು.
ಪ್ರಾಸ್ತವಿಕವಾಗಿ ಮಾತನಾಡಿದ ಆಶಾ, ಮಕ್ಕಳು ಶ್ರಮ ವಹಿಸಿ ಓದುತ್ತಾರೆ. ಯಶಸ್ಸು ಎಲ್ಲರಿಗೂ ದೊರೆಯುವುದಿಲ್ಲ. ಸಮಾಧಾÀನ ಚಿತ್ತದಿಂದ ಪೋಷಕರು ಸ್ವೀಕರಿಸಿ, ಅವರನ್ನು ಹುರುದುಂಬಿಸುವ ಕಾರ್ಯ ಮಾಡಬೇಕು. ಸ್ಪರ್ಧಾ ಮನೋಭಾವ ಬೆಳೆಸಬೇಕು ಎಂದರು.
ಆಗಮಿಸಿದ ಎಲ್ಲರನ್ನು ಪೂರ್ಣಿಮಾ ಸ್ವಾಗತಿಸಿದರು. ಶ್ರೀಲತಾ ವಂದಿಸಿದರು. ವೇಣುಗೋಪಾಲ್, ಹರಿಪ್ರಸಾದ್, ಡಾ. ಗುರುಪಾದಪ್ಪ, ಭಾರತಿ, ಪ್ರೊ. ಚಂದ್ರಶೇಖರ್, ವಿಜಯೇಂದ್ರ, ವಾಗೇಶ್, ಜಿ.ವಿಜಯಕುಮಾರ್, ಸುರೇಶ್ ಕುಮಾರ್, ಮಲ್ಲಿಕಾರ್ಜುನ್ ಕುಟುಂಬ ಸದಸ್ಯರು, ಸ್ನೇಹಿತರು ಹಿತೈಷಿಗಳು ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...