Home ರಾಜ್ಯBig news: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಬಿಎಸ್ ವೈ ವಿರುದ್ಧ ಎಫ್ಐಆರ್ ..!ಇದು ನಿಜಾನಾ..?!

Big news: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಬಿಎಸ್ ವೈ ವಿರುದ್ಧ ಎಫ್ಐಆರ್ ..!ಇದು ನಿಜಾನಾ..?!

by EDITOR NEWS WARRIORS
0 comments

ಮಾಜಿ ಮುಖ್ಯಮಂತ್ರಿ ಬಿಜೆಪಿಯ ಹಿರಿಯ ಮುಖಂಡ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದ್ದು.

17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು  ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಳೆದು ತಿಂಗಳು ಫೆಬ್ರವರಿ ಎರಡರಂದು ಯಾವುದೋ ಕೆಲಸದ ನಿಮಿತ್ತ ಸಹಾಯ ಕೇಳಲು ಬಿ ಎಸ್ ಯಡಿಯೂರಪ್ಪ ಅವರ ಬಳಿ ತಾಯಿ ಮತ್ತು ಮಗಳು ಹೋದಾಗ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ತಾಯಿ ನಿನ್ನೆ ತಡರಾತ್ರಿ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಫೋಕ್ಸು ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 354  ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಪ್ರಕರಣ :

ರಾಜಾಹುಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧವೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದು ಅದು ಈ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ಇದು ಯಾವ ಹಂತಕ್ಕೆ ತಲುಪುತ್ತದೆ ಕಾದುನೋಡಬೇಕು ಸಾಮಾನ್ಯವಾಗಿ ಪೋಕ್ಸೋ ಕಾಯ್ದೆ ಎನ್ನುವುದು ಬಲಿಷ್ಠವಾದ ಕಾಯ್ದೆಯಾಗಿದ್ದು ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರು ಯಾರೇ  ವಿರುದ್ಧ ಆರೋಪ ಬಂದಿದ್ದರು ಅವರನ್ನು ಬಂಧಿಸದೆ ಬಿಡುವುದಿಲ್ಲ ಒಂದು ವೇಳೆ ಬಂಧಿಸದಿದ್ದರೆ ಸಂಬಂಧಪಟ್ಟ ತನಿಖಾ ಅಧಿಕಾರಿಗಳ ವಿರುದ್ಧವೇ ತನಿಖೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಹಿಂದೆ ಮುರುಘಾಮಠದ ಸ್ವಾಮೀಜಿ ವಿಷಯದಲ್ಲೂ ಇದೇ ತರ ಪ್ರಕರಣ ಆಗ ಸ್ವಾಮೀಜಿ ಬಂಧನವಾಗಿ ಜೈಲಿನಲ್ಲಿದ್ದು ಇದ್ದಿದ್ದು ಇತಿಹಾಸ ಈಗ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿರುವುದು ಒಂದು ವೇಳೆ ಬಂಧಿಸದಿದ್ದರೆ ಇದು ವಿರೋಧಿಗಳಿಗೆ ಟೀಕೆ ಮಾಡಲು ಒಂದು ಅಸ್ತ್ರವಾಗಬಹುದು ಹಾಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುವುದರಿಂದ ಬಂಧನ ಮಾಡುವ ಸಾಧ್ಯತೆ ಹೆಚ್ಚು.  ಇಂತಹ ಪ್ರಕರಣದಲ್ಲಿ ನಿರೀಕ್ಷೆ ಜಾಮೀನು ಸಿಗುವ ಸಾಧ್ಯತೆ ಬಹಳ ಕಡಿಮೆ ಒಂದು ವೇಳೆ ನಿರೀಕ್ಷಣಾ ಜಾಮೀನು ಕೊಟ್ಟರು ಸಹ ಉಳಿದ ಕಡೆ ಬೇರೆ ವಕೀಲರಗಳು ನಮಗೂ ಕೂಡ ಇಂತಹ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಿ ಎಂದು ನ್ಯಾಯಾಧೀಶರಲ್ಲಿ ಮನವಿ ಸಲ್ಲಿಸಬಹುದು ಹಾಗಾಗಿ ಈ ಪ್ರಕರಣ ತೀವ್ರ ಕುತೂಹಲ ಕೆರಳಿಸಿದ್ದು ಮುಂದೆ ಏನಾಗುತ್ತದೆ ಎನ್ನುವುದು ಕಾದು ನೋಡಬೇಕು.

ರಘುರಾಜ್ ಹೆಚ್‌.ಕೆ..9449553305.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!