Wednesday, April 30, 2025
Google search engine
Homeಶಿವಮೊಗ್ಗಆಯನೂರು ಮಂಜುನಾಥ್ ಗೆ   ನೈರುತ್ಯ ಪದವೀಧರ ಕ್ಷೇತ್ರ..!

ಆಯನೂರು ಮಂಜುನಾಥ್ ಗೆ   ನೈರುತ್ಯ ಪದವೀಧರ ಕ್ಷೇತ್ರ..!

ಬಾರಿ ಕುತೂಹಲ ಮೂಡಿಸಿದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಅನ್ನು ಕೊನೆಗೂ ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಪಕ್ಷ ನೀಡಿದೆ.

ಹಲವರು ನೈರುತ್ಯ ಪದವೀಧರ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದರು ಅದರಲ್ಲೂ ಪ್ರಮುಖವಾಗಿ ಎಸ್ಪಿ ದಿನೇಶ್ ಪ್ರಬಲ ಆಕಾಂಕ್ಷಿಯಾಗಿದ್ದರು ಆದರೆ ಕಾಂಗ್ರೆಸ್ ಪಕ್ಷ ಮಂಜುನಾಥ್ ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ.

ಆಯನೂರು ಮಂಜುನಾಥ್ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿಕೊಂಡಾಗ ನೈರುತ್ಯ ಪದವೀಧರ ಕ್ಷೇತ್ರ ತಮಗೆ ನೀಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕೇಳಿಕೊಂಡಿದ್ದರು ಹಾಗೆ ಅವರುಗಳು ಸಹ ನೈರುತ್ಯ ಪದವೀಧರ ಕ್ಷೇತ್ರ ನೀಡುತ್ತೇವೆ ಎಂದು ಆಶ್ವಾಸನೆ ಕೂಡ ನೀಡಿದ್ದರು ಎನ್ನಲಾಗಿತ್ತು.

ಹಾಗೆ ಮುಂದುವರೆದು ಆಯನೂರು ಮಂಜುನಾಥ್ ಅವರು ನೈರುತ್ಯ ಪದವೀಧರ ಕ್ಷೇತ್ರ ತನಗೆ ಸಿಗುತ್ತದೆ ಎನ್ನುವ ಪ್ರಬಲ ನಂಬಿಕೆ ಇಟ್ಟುಕೊಂಡಿದ್ದರು ಹಾಗೆ ಅದಕ್ಕೆ ಪೂರಕವಾಗಿ ಕೆಲಸವನ್ನು ಮಾಡುತ್ತಿದ್ದರು ಸಮಯ ಸಿಕ್ಕಾಗಲೆಲ್ಲ ಇದರ ಬಗ್ಗೆ ಪತ್ರಿಕಾಗೋಷ್ಠಿಗಳಲ್ಲಿ ಹೇಳುತ್ತಿದ್ದರು ಆದರೆ ಎಸ್ಪಿ ದಿನೇಶ್ ತಮಗೆ ನೈರುತ್ಯ ಪದವೀಧರ ಕ್ಷೇತ್ರ ಸಿಗಬೇಕು ಎಂದು ತಮ್ಮ ಬೆಂಬಲಿಗರೊಡನೆ ಅನೇಕ ಬಾರಿ ಹೈಕಮಾಂಡ್ ಅನ್ನು ಭೇಟಿ ಮಾಡಿ ಕಾಂಗ್ರೆಸ್ನ ಮುಖಂಡರನ್ನು ಭೇಟಿ ಮಾಡಿ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು ಹಾಗೂ ಹಲವು ಬಾರಿ ಪತ್ರಿಕಾಗೋಷ್ಠಿಗಳನ್ನು ನಡೆಸಿ ತಾನು ಪ್ರಬಲ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು.

ಹೊರಗಿನಿಂದ ಬರುವವರಿಗೆ ನೀಡುವುದು ಬೇಡ ನಮಗೆ ನೀಡಬೇಕು ಎಂದು ಕೇಳಿಕೊಂಡಿದ್ದರು ಆದರೆ ಕೊನೆಗೂ ಕಾಂಗ್ರೆಸ್ ಎಲ್ಲಾ ಗೊಂದಲಕ್ಕೆ ತೆರೆ ಎಳೆದಿದ್ದು ಆಯನೂರು ಮಂಜುನಾಥ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ನೀಡುವುದರ ಮೂಲಕ ಕುತೂಹಲಕ್ಕೆ ತೆರೆ ಎಳೆದಿದೆ ಎನ್ನಬಹುದು.

ರಘುರಾಜ್ ಹೆಚ್‌.ಕೆ..9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...