Wednesday, April 30, 2025
Google search engine
Homeರಾಜ್ಯಕೋರೋಣ ಸಂಕಷ್ಟದ ನಡುವೆ ಮಾನವೀಯತೆ ಮೆರೆದ ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ್....

ಕೋರೋಣ ಸಂಕಷ್ಟದ ನಡುವೆ ಮಾನವೀಯತೆ ಮೆರೆದ ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ್….

ಹರಿಹರ:-ಹರಿಹರದ ಮೇರಿ ಜಾತ್ರೆ ರದ್ದಾಗಿದ್ದರೂ ಭಕ್ತರ ದಂಡು ಮಾತ್ರ ಆಗಮಿಸುತ್ತಲೇ ಇತ್ತು.

ತಮ್ಮ ಭಕ್ತಿಯನ್ನು ದೇವರಿಗೆ ಸಮರ್ಪಿಸಲು ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರರಾಜ್ಯದಿಂದಲೂ ಭಕ್ತರು ಆಗಮಿಸಿದ್ದರು .

ಸರ್ಕಾರದ ಕೋವಿಡ್ ಮಾರ್ಗಸೂಚಿಯ ನಿಯಮಗಳ ಪಾಲನೆಯನ್ನು ಪಾಲಿಸುವಂತೆ ಜಾತ್ರಾ ವ್ಯವಸ್ಥಾಪಕ ಮಂಡಳಿಯವರ ಜೊತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಾಕೀತು ಮಾಡಿದ್ದರು.ಆದರೆ ಭಕ್ತರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು .

ಭಕ್ತರ ಒತ್ತಾಯದ ಮನವಿಯ ಮೇಲೆ ಸಂಬಂಧಿಸಿದ ಅಧಿಕಾರಿಗಳು ದರ್ಶನಕ್ಕೆ ಸರದಿ ಸಾಲಿನಂತೆ, ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ದರ್ಶನ ಮಾಡಲು ಅನುವು ಮಾಡಿಕೊಟ್ಟರು .

ಮೇರಿ ಮಾತೆಯ ದರ್ಶನ ಪಡೆಯಲು ಎಂಭತ್ತು ವರ್ಷದ ಅಂಗವಿಕಲ ವಯೋವೃದ್ಧೆ ಆಗಮಿಸಿದ್ದರು .ವಯೋವೃದ್ಧೆ ಮೇರಿ ಮಾತೆಗೆ ಭಕ್ತಿಯನ್ನು ಸಮರ್ಪಿಸಿ ಬರುವಾಗ ತುಂಬಾ ಆಯಾಸಗೊಂಡಂತೆ ಕಾಣುತ್ತಿದ್ದರು.ವೃದ್ಧೆ ಆಯಾಸಗೊಂಡಿದ್ದನ್ನು ಗಮನಿಸಿದ ದಾವಣಗೆರೆ ಗ್ರಾಮಾಂತರ ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ್ ಅವರು ವಯೋವೃದ್ಧೆಗೆ ಆಟೋದಲ್ಲಿ ಹೋಗಲು ಅನುವು ಮಾಡಿಕೊಡುವುದರ ಜೊತೆಗೆ,ಆಟೋವನ್ನ ಹತ್ತಿಸಿ ವೃದ್ಧಿಗೆ ಸಹಾಯ ಮಾಡುವುದರ ಜೊತೆಗೆ ಮಾನವೀಯತೆಯನ್ನು ಮೆರೆದಿದ್ದಾರೆ .

ತಾವೊಬ್ಬ ಅಧಿಕಾರಿ ಎಂಬುದನ್ನು ಮರೆತು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ವಯೋವೃದ್ಧೆಗೆ ಮೊಮ್ಮಗನಂತೆ ಸಹಾಯ ಮಾಡಿ ,”ಮಾನವೀಯತೆ ಗಿಂತ ದೊಡ್ಡದು ಮತ್ತೊಂದಿಲ್ಲ” ಎಂಬುದನ್ನ ಸಾಬೀತು ಮಾಡಿದ್ದಾರೆ.

ಯಾರು ಎಷ್ಟೇ ದೊಡ್ಡವರಿರಲಿ, ಎಷ್ಟೇ ಅಧಿಕಾರವಿರಲಿ ಸಂಕಷ್ಟದ ಪರಿಸ್ಥಿತಿಯ ಸಂದರ್ಭದಲ್ಲಿ ಇನ್ನೊಬ್ಬರ ಸಹಾಯಕ್ಕೆ ಧಾವಿಸಿ ಅವರ ನೋವಿಗೆ ಸ್ಪಂದಿಸಿದಾಗ ನಾವು ಪಡೆದ ಶಿಕ್ಷಣಕ್ಕೆ ಒಂದು ಅರ್ಥ ಬರುತ್ತದೆ .ಈ ಸಹಾಯವೇ ನಾವು ಗುರುಗಳಿಗೆ ದಕ್ಷಿಣೆಯಾಗಿ ನೀಡುವುದು.ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ ಅವರ ಕಾರ್ಯ ಇಡೀ ಜಿಲ್ಲೆಯ ಜನರ ಪ್ರಶಂಸೆಗೆ ಪಾತ್ರವಾಗಿದೆ.

ನೊಂದವರಿಗೆ ನೆರವು ನೀಡುವ ನಮ್ಮ ಪೋಲೀಸ್ ಅಧಿಕಾರಿಗೆ ನಮ್ಮದೊಂದು ಬಿಗ್‌ ಸೆಲ್ಯೂಟ್ .

ವರದಿ…ಪ್ರಕಾಶ್ ಮಂದಾರ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...