Wednesday, April 30, 2025
Google search engine
Homeಶಿವಮೊಗ್ಗಕುತೂಹಲ ಮೂಡಿಸಿದ ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಜಂಟಿ ಪತ್ರಿಕಾಗೋಷ್ಠಿ..!

ಕುತೂಹಲ ಮೂಡಿಸಿದ ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಜಂಟಿ ಪತ್ರಿಕಾಗೋಷ್ಠಿ..!

ನೈರುತ್ಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾಗಿದ್ದ ಎಸ್ಪಿ ದಿನೇಶ್ ಹಾಗೂ ರಂಗಸ್ವಾಮಿ ಅವರು ನಾಳೆ ಪತ್ರಿಕಾಗೋಷ್ಠಿಯನ್ನು ಇಟ್ಟುಕೊಂಡಿದ್ದು ಅದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಈಗಾಗಲೇ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಆಯನೂರು ಮಂಜುನಾಥ್ ಅವರಿಗೆ ಫೈನಲ್ ಆಗಿದ್ದು ಅವರು ಪತ್ರಿಕಾಗೋಷ್ಠಿಯಲ್ಲಿ ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಚುನಾವಣೆಯಲ್ಲಿ ಗೆದ್ದು ಬರುತ್ತೇನೆ ಇಷ್ಟು ವರ್ಷ ಬಿಜೆಪಿಗೆ ಮೀಸಲಾಗಿದ್ದ ಆ ಕ್ಷೇತ್ರವನ್ನು ಕಾಂಗ್ರೆಸ್ ಗೆ  ತರುವುದು ಸವಾಲಿನ ಕೆಲಸ ಅದನ್ನು ನಾನು ಖಂಡಿತ ಮಾಡುತ್ತೇನೆ ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದ್ದರು.

ಇದಕ್ಕೂ ಮೊದಲು ಎಸ್ಪಿ ದಿನೇಶ್  ಆಯನೂರ್ ಮಂಜುನಾಥ್ ಅವರಿಗೆ ಟಿಕೆಟ್ ನೀಡಬಾರದು ನಾನು ಪ್ರಬಲ ಆಕಾಂಕ್ಷಿ ನನಗೆ ಟಿಕೆಟ್ ನೀಡಬೇಕು ಎಂದು ತಮ್ಮ ಬೆಂಬಲಿಗರೊಡನೆ ಹಲವು ಬಾರಿ ಪತ್ರಿಕಾಗೋಷ್ಠಿ ನಡೆಸಿದ್ದರು.

ಆದರೆ ಇವೆಲ್ಲ ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್ ಪಕ್ಷ ಕೊನೆಗೂ ಆಯನೂರ್ ಮಂಜುನಾಥ್ ಗೆ ಮಣೆ ಹಾಕಿದ್ದು ಅವರಿಗೆ ಟಿಕೆಟ್ ನೀಡುವುದರ ಮೂಲಕ ಈ ಗೊಂದಲಕ್ಕೆ ತೆರೆ ಎಳೆದಿತ್ತು.

ಆದರೆ ಈಗ ಪ್ರಬಲ ಆಕಾಂಕ್ಷಿಗಳಾಗಿದ್ದ ರಂಗಸ್ವಾಮಿ ಹಾಗೂ ಎಸ್ ಪಿ ದಿನೇಶ್ ಅವರು ನಾಳೆ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ ಏಕೆಂದರೆ ಈ ಪತ್ರಿಕಾಗೋಷ್ಠಿಯಲ್ಲಿ ಅವರು ಈಗಾಗಲೇ ಟಿಕೆಟ್ ಘೋಷಣೆಯಾಗಿರುವ ಆಯನೂರು ಮಂಜುನಾಥ್ ಅವರಿಗೆ ತಮ್ಮ ಬೆಂಬಲ ನೀಡುತ್ತಾರೋ ಅಥವಾ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಾರೋ ಕಾದುನೋಡಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...