Home ಬಿಜೆಪಿಬಿಜೆಪಿಗೆ ಬಿಸಿ ತುಪ್ಪವಾದ ಬಾಂಬೆ ಬಾಯ್ ..! ಮಗನನ್ನು ಕಾಂಗ್ರೆಸ್ ಗೆ ಸೇರಿಸಲು ತೆರೆಮರೆಯಲ್ಲಿ ಕಸರತ್ತು..!

ಬಿಜೆಪಿಗೆ ಬಿಸಿ ತುಪ್ಪವಾದ ಬಾಂಬೆ ಬಾಯ್ ..! ಮಗನನ್ನು ಕಾಂಗ್ರೆಸ್ ಗೆ ಸೇರಿಸಲು ತೆರೆಮರೆಯಲ್ಲಿ ಕಸರತ್ತು..!

by EDITOR NEWS WARRIORS
0 comments

ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಸ್ವಪಕ್ಷ ಬಿಜೆಪಿಯ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು ಕೆಲವು ನಾಯಕರು ಪಕ್ಷದ ವಿರುದ್ಧ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವ ಆರೋಪಗಳಿವೆ.

ಹಾಲಿ ಶಾಸಕ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪಾಲಿಗೆ   ಬಿಸಿ ತುಪ್ಪವಾಗಿದ್ದು, ಪಕ್ಷದ ಪ್ರಚಾರಕ್ಕೂ ಬಾರದೇ ಇತ್ತ ಪಕ್ಷ ಬಿಟ್ಟು ಕಾಂಗ್ರೆಸ್ ಕಡೆಯೂ ಹೋಗದೆ ಸ್ವಪಕ್ಷ ಬಿಜೆಪಿಯ ವಿರುದ್ಧವೇ ಚುನಾವಣೆ ನಡೆಸುತ್ತಿದ್ದು ಕಾಂಗ್ರೆಸ್ ಕಡೆ ಮತಯಾಚನೆ ಮಾಡುತ್ತಿದ್ದಾರೆ. 

ಅಧಿಕಾರಕ್ಕಾಗಿ ಅಂದಿನ ಕಾಂಗ್ರೆಸ್ ಸರ್ಕಾರವನ್ನೇ ಬೀಳಿಸಿ ಬಂಡಾಯವೆದ್ದಿದ್ದ ಬಾಂಬೆ ಬಾಯ್ಸ್ ಗಳಲ್ಲಿ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಒಬ್ಬರು.ಬಿಜೆಪಿ ಹೆಸರಿನಲ್ಲಿ ಗೆದ್ದ ಯಲ್ಲಾಪುರ ಶಾಸಕ ಮತ್ತೊಮ್ಮೆ ರೆಬೆಲ್ ಆಗಿದ್ದಾರೆ.

ಪುತ್ರನನ್ನು ಕಾಂಗ್ರೆಸ್ ಗೆ ಸೇರಿಸಲು ಕಸರತ್ತು :

ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷದ ಜೊತೆ ಕಾಣಿಸಿಕೊಳ್ಳುತ್ತಿರುವ ಶಿವರಾಂ ಹೆಬ್ಬಾರ್ ಶೀಘ್ರದಲ್ಲೇ ತಮ್ಮ ಪುತ್ರನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹೆಬ್ಬಾರ್ ನಡೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿ :

ಇನ್ನು ಬಿಜೆಪಿಯಲ್ಲೇ ಇದ್ದು ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿರುವ ಹೆಬ್ಬಾರ್ ನಡೆಗೆ ಪಕ್ಷದಲ್ಲಿ ಅಸಮಾಧಾನ ಹೆಚ್ಚಿಸಿದೆ. ಇದೇ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರು ಹೆಬ್ಬಾರ್ ವಿರುದ್ಧ ಕಿಡಿಕಾರಿದ್ದಾರೆ.

ಶಿವರಾಮ್ ಹೆಬ್ಬಾರ್ ಬಿಜೆಪಿ ತೊರೆದರೆ ಬಿಜೆಪಿಗೆ ನಷ್ಟ :

ಶಿವರಾಂ ಹೆಬ್ಬಾರ್ ನಡೆಯ ವಿರುದ್ಧ ಬಿಜೆಪಿ ಕ್ರಮ ಕೈಗೊಂಡರೆ ಬಿಜೆಪಿ ಪಕ್ಷಕ್ಕೆ ನಷ್ಟ ಆಗುವ ಸಾಧ್ಯತೆ ಇದ್ದು ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರೆ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ .


Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...