Sunday, June 15, 2025
Google search engine
Homeಕಾಂಗ್ರೆಸ್ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

ಶಿವಮೊಗ್ಗ: ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಸಿದ್ದೇಶ್ವರ ನಗರದ ೧೪ ನೇ ವಾರ್ಡಿನಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗೀತಾ ಅವರ ರಕ್ತದಲ್ಲಿಯೇ ಸಮಾಜ ಸೇವೆಯ ಗುಣ ಇದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ಸಾಮಾಜಿಕ ಮೌಲ್ಯಗಳನ್ನು ಗೀತಾಗೆ ವರವಾಗಿ ನೀಡಿ ಹೋಗಿದ್ದಾರೆ. ಇದು ರಾಜಕೀಯ ಪ್ರವೇಶಕ್ಕೆ ಪ್ರೇರಣೆ ನೀಡಿದೆ ಎಂದರು‌.

ಮಹಿಳೆಯರು ಎಲ್ಲಾ ರಂಗದಲ್ಲಿಯೂ ಮುಂದೆ ಇದ್ದಾರೆ. ಗೀತಾಗೆ ಒಂದು ಅವಕಾಶ ಕೊಡಿ ನಾನು ಅವರಿಂದ ಕೆಲಸ ಮಾಡಿಸುತ್ತೇನೆ‌ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಶಿವಮೊಗ್ಗ ಜನರ ಸೇವೆ ಮಾಡಲು ಸಿಕ್ಕ ಅವಕಾಶವಿದು. ಕೇವಲ ಚುನಾವಣೆಯಲ್ಲಿ ಮತಗಳಿಕೆಯ ರಾಜಕೀಯಕ್ಕೆ ಸ್ವಾರ್ಥದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿಲ್ಲ. ಇಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ದುರಾಡಳಿತದಿಂದ ಜನ ಸಾಮಾನ್ಯರನ್ನು ಮುಕ್ತಗೊಳಿಸಲು ಈ ಯೋಜನೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಜನರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನೂ ಕೂಡ ಸಾಗಬೇಕು ಎಂದು ಕನಸು ಕಂಡಿದ್ದೇನೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷದವರು ಕಳೆದ ೧೫ ವರ್ಷಗಳಿಂದ ಸುಳ್ಳು ಹೇಳಿಕೊಂಡು, ಜನ ಸಾಮಾನ್ಯರಿಗೆ ಪೊಳ್ಳು ಭರವಸೆ ನೀಡುತ್ತ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ, ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಮಾತನಾಡಿ, ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದು ಓದು ಆರಂಭಿಸಿದ ವಿದ್ಯಾರ್ಥಿಯೊರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿ ಮಾಧ್ಯಮಗಳ ಎದುರು ‘ತಂದೆಯನ್ನು ಕಳೆದುಕೊಂಡಿರುವ ನನಗೆ ಮತ್ತು ನನ್ನ ತಾಯಿಗೆ ಗೃಹಲಕ್ಷ್ಮಿ ಯೋಜನೆ ನೆರವು ನೀಡಿದೆ ಎಂದು ತಿಳಿಸಿದ್ದಾನೆ‌. ಇದರಿಂದ, ಗ್ಯಾರಂಟಿ ಯೋಜನೆಗಳು ಬಡ ಮಕ್ಕಳ ಓದಿಗೆ ಸಹಕಾರಿ ಆಗಿದೆ ಎನ್ನುವುದನ್ನು ಜನ ಸಾಮಾನ್ಯರು ಅರ್ಥೈಸಿಕೊಳ್ಳಬೇಕು ಎಂದರು.

ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ಕಲೀಂ ಪಾಶ, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ ಸೇರಿ ಕಾರ್ಯಕರ್ತರು ಇದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!