Sunday, June 15, 2025
Google search engine
Homeಶಿವಮೊಗ್ಗಲೋಕಾಯುಕ್ತ ಬಲೆಗೆ ಎರಡು ತಿಮಿಂಗಿಳಗಳು..!

ಲೋಕಾಯುಕ್ತ ಬಲೆಗೆ ಎರಡು ತಿಮಿಂಗಿಳಗಳು..!

ಇಂದು ಶಿವಮೊಗ್ಗ ಲೋಕಾಯುಕ್ತ ಬಲೆಗೆ ಎರಡು  ತಿಮಿಂಗಿಲಗಳು ಬಿದ್ದಿದ್ದು ಕೃಷಿ ವಿವಿಯ ಕಟ್ಟಡದ ಮೇಲ್ಛಾವಣಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದ ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತ್ ಕುಮಾರ್ ಮತ್ತು ಅಕೌಂಟೆಂಟ್ ಗಿರೀಶ್ ಜಿ.ಆರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಚಿತ್ರದುರ್ಗದ ಹಿರಿಯೂರಿನಲ್ಲಿ ಕೆವಿಕೆ ಬಬ್ಬೂರ್ ಫಾರ್ಮ್ ನ ಆಡಳಿತ ವಿಭಾಗದ ಕಚೇರಿಯ ಮೇಲ್ಛಾವಣಿ ಕಾಮಗಾರಿಗೆ 4,23,226 ರೂ.ಗಳ ಟೆಂಡರ್ ಕರೆಯಲಾಗಿದ್ದು, ಸುನೀಲ್ ಎಂಬುವರು 3,59,331 ರೂ.ಗಳಿಗೆ ಗುತ್ತಿಗೆ ಪಡೆದಿದ್ದರು.

ಫೆ.19 ರಂದು ಕಾಮಗಾರಿ ಆರಂಭವಾಗಿ ಮಾ.4 ರಂದು ಕಾಮಗಾರಿ ಪೂರ್ಣವಾಗಿರುತ್ತದೆ. ಕಾಮಗಾರಿ ವೀಕ್ಷಿಸಲು ಬಂದು ವಿವಿಯ ಎಇಇ ಲೋಹಿತ್ ಪ್ರಶಾಂತ್ ಕುಮಾರ್ ಹಣ ಬಿಡಯಗಡೆಗೆ 40 ಸಾವಿರ ರೂ ಬೇಡಿಕೆ ಇಟ್ಟಿದ್ದರು.

ಕೃಷಿ ವಿವಿಗೆ ಬಂದು ಎಇಇರನ್ನ ಭೇಟಿಯಾದ ಸುನೀಲ್ ಡಿಪಾಸಿಟ್ ಆಗಿ ಇಟ್ಟಿದ್ದ ಎಫ್‌ಡಿಹಣವನ್ನ ವಾಪಾಸ್ ಕೊಡಲು ಕೇಳಿದ್ದಾರೆ 40 ಸಾವಿರ ರೂ ಹಣವನ್ನ ಅಕೌಂಟೆಂಟ್ ಗಿರೀಶ್ ಗೆ ಕೊಡಿ ಆಗ ಎಫ್ ಡಿ ಹಣ ಬಿಡುಗಡೆ ಮಾಡುವುದಾಗಿ ಹೇಳಿರುವ ಮಾತನ್ನ ಸುನೀಲ್ ವಾಯ್ಸ್ ರೆಕಾರ್ಡ್ ಮಾಡಿಕೊಂಡಿದ್ದರು.

ಲೋಕಾಯುಕ್ತರರಿಗೆ ದೂರು ನೀಡಿದ ಕಾರಣ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ   ಲೋಹಿತ್ ಪ್ರಶಾಂತ್ ಕುಮಾರ, ಎ.ಇ.ಇ ಮತ್ತು ಗಿರೀಶ್. ಜಿ.ಆರ್, ಅಕೌಂಟ್ ಅಸಿಸ್ಟೆಂಟ್ ಇವರು ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರೂ.30,000/-ಲಂಚದ ಹಣವನು- ದೂರುದಾರರಿಂದ ಪಡೆಯುವಾಗ ಲೋಕಾಯುಕ್ತರ ಕೈಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ.

ಅವರಿಂದ ರೂ.30,000/-ಗಳ ಲಂಚದ ಹಣವನ್ನು ಜಪ್ತಿಪಡಿಸಿಕೊಂಡಿದ್ದು, ಆಪಾದಿತರನ್ನು ಬಂಧಿಸಿ ತನಿಖೆಯನ್ನು ಲೋಕಾಯುಕ್ತರು  ಕೈಗೊಂಡಿರುತ್ತಾರೆ.

ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಕಚೇರಿಯ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ, ಎಂ.ಹೆಚ್, ಹಾಗೂ ಪೊಲೀಸ್ ಉಪಾಧೀಕ್ಷಕರಾದ ಉಮೇಶ್ ಈಶ್ವರನಾಯ್ಕ ಇವರ  ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಟ್ರ್ಯಾಪ್ ಕಾಲಕ್ಕೆ ಶಿವಮೊಗ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ನಿರೀಕ್ಷಕರುಗಳಾದ ಪ್ರಕಾಶ್, ವೀರಬಸಪ್ಪ ಎಲ್ ಕುಸಲಾಪುರ,ಸಿಬ್ಬಂದಿಯವರಾದ ಯೋಗೇಶ್ ಸಿ.ಹೆಚ್.ಸಿ, ಮಹಂತೇಶ್ ವಿ.ಎ, ಸಿ.ಹಚ್.ಸಿ, ಸುರೇಂದ್ರ ಹೆಚ್.ಜಿ, ಸಿ.ಹೆಚ್.ಸಿ, ಬಿ.ಟಿ ಚನ್ನೇಶ ಸಿ.ಪಿ.ಸಿ, ಪ್ರಶಾಂತ್ ಕುಮಾರ್ ಸಿ.ಪಿ.ಸಿ, ರಘು ನಾಯ್ಕ್  ಸಿ.ಪಿ.ಸಿ, ಅರುಣ್ ಕುಮಾರ್ ಸಿ.ಪಿ.ಸಿ, ಶ್ರೀಮತಿ ಪುಟ್ಟಮ್ಮ, ಮಪಿಸಿ, ಪ್ರದೀಪ್, ಎ.ಪಿ.ಸಿ, ಗೋ- ವಿ. ಎ.ಪಿ.ಸಿ, ಜಯಂತ್ ಎ.ಪಿ.ಸಿ ಇವರುಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು..

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!