Sunday, June 15, 2025
Google search engine
Homeತೀರ್ಥಹಳ್ಳಿಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ಗ್ರಾಮಸ್ಥರ ಬೇಡಿಕೆ ಈಡೇರುಸ್ತಾರ ಜಿಲ್ಲಾಧಿಕಾರಿಗಳು..!

ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ಗ್ರಾಮಸ್ಥರ ಬೇಡಿಕೆ ಈಡೇರುಸ್ತಾರ ಜಿಲ್ಲಾಧಿಕಾರಿಗಳು..!

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ‌ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ವಾಸದ ಮನೆಗಳಿಗೆ ಸರಿಯಾದ ರಸ್ತೆ ಸಂಪರ್ಕವಿಲ್ಲ ರಸ್ತೆ ಸರಿ ಇಲ್ಲದ ಕಾರಣ 20 ರಿಂದ 30 ಜನ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ ಇದೇ ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ ಎನ್ನುವುದು ನೊಂದ ಯುವಕರ ದೂರು ಹಾಗೆ ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇರದೆ ನೀರಿನ ಸಮಸ್ಯೆ ಕೂಡ ಎದುರಾಗಿದೆ. ಹಾಗೆ ಗ್ರಾಮದ ಹಳ್ಳಗಳಿಗೆ ಹೋಗಲು ಇರುವ ಕಲ್ಲು ಸಂಕಗಳಿಗೆ ಸರಿಯಾದ ಮಾರ್ಗಗಳು ಇಲ್ಲದೆ ಅವ್ಯವಸ್ಥೆಯ ಆಗರವಾಗಿದೆ ಕೂಡಲೇ ಇವೆಲ್ಲವನ್ನೂ ಸರಿಪಡಿಸಬೇಕು ಇಲ್ಲವಾದರೆ ನಾವು ಯಾವುದೇ ರೀತಿಯಿಂದಲೂ ಮತಗಳನ್ನು ಚಲಾಯಿಸುವುದಿಲ್ಲ ಈ ಇಡೀ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ದೂರು ನೀಡಿದ್ದಾರೆ.

ಗ್ರಾಮಸ್ಥರ ದೂರಿಗೆ ಸ್ಪಂದಿಸುತ್ತಾರಾ ಜಿಲ್ಲಾಧಿಕಾರಿಗಳು ..?


ಗ್ರಾಮಸ್ಥರು ನೀಡಿರುವ ಮೂಲಭೂತ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಬೆಳಕು ಚೆಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಿ ಸುಸೂತ್ರವಾಗಿ ಚುನಾವಣೆಗೆ ಮತ ಚಲಾಯಿಸುವಂತೆ ನೋಡಿಕೊಳ್ಳುತ್ತಾರೆ ಎನ್ನುವ ಭರವಸೆ ಗ್ರಾಮಸ್ಥರದ್ದು ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎನ್ನುವ ಆಶಯ ಕೂಡ ಪತ್ರಿಕೆಯದ್ದು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!