Wednesday, April 30, 2025
Google search engine
Homeತೀರ್ಥಹಳ್ಳಿಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ಗ್ರಾಮಸ್ಥರ ಬೇಡಿಕೆ ಈಡೇರುಸ್ತಾರ ಜಿಲ್ಲಾಧಿಕಾರಿಗಳು..!

ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ಗ್ರಾಮಸ್ಥರ ಬೇಡಿಕೆ ಈಡೇರುಸ್ತಾರ ಜಿಲ್ಲಾಧಿಕಾರಿಗಳು..!

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ‌ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ವಾಸದ ಮನೆಗಳಿಗೆ ಸರಿಯಾದ ರಸ್ತೆ ಸಂಪರ್ಕವಿಲ್ಲ ರಸ್ತೆ ಸರಿ ಇಲ್ಲದ ಕಾರಣ 20 ರಿಂದ 30 ಜನ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ ಇದೇ ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ ಎನ್ನುವುದು ನೊಂದ ಯುವಕರ ದೂರು ಹಾಗೆ ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇರದೆ ನೀರಿನ ಸಮಸ್ಯೆ ಕೂಡ ಎದುರಾಗಿದೆ. ಹಾಗೆ ಗ್ರಾಮದ ಹಳ್ಳಗಳಿಗೆ ಹೋಗಲು ಇರುವ ಕಲ್ಲು ಸಂಕಗಳಿಗೆ ಸರಿಯಾದ ಮಾರ್ಗಗಳು ಇಲ್ಲದೆ ಅವ್ಯವಸ್ಥೆಯ ಆಗರವಾಗಿದೆ ಕೂಡಲೇ ಇವೆಲ್ಲವನ್ನೂ ಸರಿಪಡಿಸಬೇಕು ಇಲ್ಲವಾದರೆ ನಾವು ಯಾವುದೇ ರೀತಿಯಿಂದಲೂ ಮತಗಳನ್ನು ಚಲಾಯಿಸುವುದಿಲ್ಲ ಈ ಇಡೀ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ದೂರು ನೀಡಿದ್ದಾರೆ.

ಗ್ರಾಮಸ್ಥರ ದೂರಿಗೆ ಸ್ಪಂದಿಸುತ್ತಾರಾ ಜಿಲ್ಲಾಧಿಕಾರಿಗಳು ..?


ಗ್ರಾಮಸ್ಥರು ನೀಡಿರುವ ಮೂಲಭೂತ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಬೆಳಕು ಚೆಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಿ ಸುಸೂತ್ರವಾಗಿ ಚುನಾವಣೆಗೆ ಮತ ಚಲಾಯಿಸುವಂತೆ ನೋಡಿಕೊಳ್ಳುತ್ತಾರೆ ಎನ್ನುವ ಭರವಸೆ ಗ್ರಾಮಸ್ಥರದ್ದು ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎನ್ನುವ ಆಶಯ ಕೂಡ ಪತ್ರಿಕೆಯದ್ದು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...