Wednesday, April 30, 2025
Google search engine
Homeದಾವಣಗೆರೆಚುನಾವಣೆ ಕರ್ತವ್ಯದಲ್ಲಿದ ಶಿಕ್ಷಕನಿಗೆ ಜಿಲ್ಲಾಧಿಕಾರಿಗಳಿಂದ ಅಮಾನತು ಆದೇಶ..! ಕಾರಣವೇನು...?!

ಚುನಾವಣೆ ಕರ್ತವ್ಯದಲ್ಲಿದ ಶಿಕ್ಷಕನಿಗೆ ಜಿಲ್ಲಾಧಿಕಾರಿಗಳಿಂದ ಅಮಾನತು ಆದೇಶ..! ಕಾರಣವೇನು…?!

ದಾವಣಗೆರೆ: ತಾಲೂಕಿನ ಚನ್ನಗಿರಿಯಲ್ಲಿ ಏಪ್ರಿಲ್ 8ರಂದು ಚುನಾವಣಾ  ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ  ಏರ್ಪಡಿಸಿದ್ದ  ತರಬೇತಿ ಕಾರ್ಯಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೆ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ಹೊರ ಹೋದ‌ ಶಿಕ್ಷಕನನ್ನು ಪ್ರಶ್ನಿಸಿದ ತಹಶೀಲ್ದಾರೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ   ಚನ್ನಗಿರಿ ಎಸ್.ಕೆ.ಎಂ.ಎಸ್ ಮಿಲ್ಲತ್ ಪ್ರೌಢಶಾಲೆ ಸಹ ಶಿಕ್ಷಕರಾದ ಸೈಯದ್ ಸುಲ್ತಾನ್ ಅಹಮದ್ ರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ‌ಆದ‌ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷ, ಸಹಾಯಕ ಅಧ್ಯಕ್ಷಾಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಮೊದಲ ಹಂತದ ತರಬೇತಿಯನ್ನು ಎಲ್ಲಾ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿಯಲ್ಲಿ ಶ್ರೀಶ್ರೀಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಬೇತಿ ನಡೆದಿರುತ್ತದೆ. ಬೆಳಿಗ್ಗೆ ತರಬೇತಿ ಮುಗಿದು ಮಧ್ಯಾಹ್ನ 3 ಗಂಟೆಗೆ ಕೊಠಡಿ ಸಂಖ್ಯೆ 10 ರಲ್ಲಿ ತರಬೇತಿ ಆರಂಭವಾಗಿತ್ತು. ಆದರೆ ಯಾವುದೇ ಅನುಮತಿ ಇಲ್ಲದೆ ತರಬೇತಿಗೆ ಹಾಜರಾದ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ತರಬೇತಿಯಿಂದ ಹೊರ ಹೋಗುತ್ತಿರುವಾಗ ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿಯೇ ಅಸಭ್ಯವಾಗಿ ವರ್ತಿಸಿದ್ದಾರೆ, ಜೊತೆಗೆ ಅನ್ಯ ಸಿಬ್ಬಂದಿಯವರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದು ಚುನಾವಣಾ ಪ್ರಾಧಿಕಾರಕ್ಕೆ ಮುಜುಗರ ಉಂಟು ಮಾಡಿರುತ್ತಾರೆ. ಇಂದು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ರ ನಿಯಮ ಉಲ್ಲಂಘನೆ ಮತ್ತು ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021 ರ ನಿಯಮ ಉಲ್ಲಂಘಿಸಿ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅಮಾನತು ಮಾಡಿ ಕೇಂದ್ರಸ್ಥಾನ ಬಿಡದಂತೆ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...