Wednesday, April 30, 2025
Google search engine
Homeಶಿವಮೊಗ್ಗಗಣಿ ಇಲಾಖೆಯ ಮಹತ್ವದ ಕಾರ್ಯಾಚರಣೆ ಮಂಡಗದ್ದೆ ಅಕ್ರಮ ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್..!

ಗಣಿ ಇಲಾಖೆಯ ಮಹತ್ವದ ಕಾರ್ಯಾಚರಣೆ ಮಂಡಗದ್ದೆ ಅಕ್ರಮ ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್..!

ಶಿವಮೊಗ್ಗ: ತಾಲೂಕಿನ ಮಂಡಗದ್ದೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಬಂದ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಬಾರಿ ಮರಳು ದಂಧೆಗೆ ಬಳಸುತ್ತಿದ್ದ ರಸ್ತೆಗಳನ್ನು  ಟ್ರಂಚ್‌ ಹೂಡಿಸಿ ಅತ್ತ ವಾಹನಗಳು ಓಡಾಡದಂತೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು.

ಆದರೂ ನಿರಂತರವಾಗಿ ನಡೆಯುತ್ತಿದ್ದ ಮರಳುದಂದೆ:

ಗಣಿ ಇಲಾಖೆಯ ಅಧಿಕಾರಿಗಳು ಟ್ರಂಚ್‌  ಒಡಿಸಿ ರಸ್ತೆಗಳನ್ನು ಮುಚ್ಚಿದ್ದರು ಕೂಡ ಮತ್ತೊಂದಷ್ಟು ಕಡೆ ರಸ್ತೆಗಳನ್ನು ಮಾಡಿಕೊಂಡು ಅಕ್ರಮವಾಗಿ ಮರಳುಗಳನ್ನು ತೆಗೆದು ನಿರಂತರವಾಗಿ ಹಗಲು ರಾತ್ರಿ ಎನ್ನದೆ ದಂದೆ ನಡೆಸುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಎಲ್ಲಾ ಭಾಗಗಳಲ್ಲಿ ರಸ್ತೆಗಳಿಗೂ ಟ್ರಂಚ್‌ ಹೊಡಿಸಿ ಮುಚ್ಚಿ ತಾತ್ಕಾಲಿಕವಾಗಿ ಅಕ್ರಮ ಮರಳು ದಂಧೆ ನಡೆಯದಂತೆ ಬ್ರೇಕ್ ಹಾಕಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಬಂದಮೇಲೆ ನಿರಂತರವಾಗಿ ಅಕ್ರಮ ಮರಳು ದಂಧೆಗಳ ಮೇಲೆ ದಾಳಿ :

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಅವರು ಬಂದಮೇಲೆ ನಿರಂತರವಾಗಿ ಅಕ್ರಮ ಮರಳು ದಂಧೆ  ಮೇಲೆ ದಾಳಿ ನಡೆಯುತ್ತಿದ್ದು ದಿಟ್ಟ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಎಲ್ಲೇ ಖಚಿತ ಮಾಹಿತಿ ಬಂದರು ಅಲ್ಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಿ ದಿಟ್ಟ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಇಲ್ಲಿವರೆಗೂ ಸುಮಾರು ಒಂದುವರೆ ಕೋಟಿ  ಅಷ್ಟು ಸರ್ಕಾರಕ್ಕೆ ವಂಚನೆ ಆಗುತ್ತಿದ್ದ ರಾಜಸ್ವ ಹಣವನ್ನು  ಅಕ್ರಮ ದಂಧೆಗೆ ಮಾಡುತ್ತಿದ್ದವರಿಂದ ವಸೂಲಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...