Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ಹೆಣ್ಣು ಭ್ರೂಣ ಹತ್ಯೆ : ರೆಡ್ ಹ್ಯಾಂಡಾಗಿ ಹಿಡಿದ ಅಧಿಕಾರಿಗಳು..!

ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ಹೆಣ್ಣು ಭ್ರೂಣ ಹತ್ಯೆ : ರೆಡ್ ಹ್ಯಾಂಡಾಗಿ ಹಿಡಿದ ಅಧಿಕಾರಿಗಳು..!

ಮಂಡ್ಯ: ಸಕ್ಕರೆನಾಡಲ್ಲಿ ಹೆಣ್ಣು ಬ್ರೂಣ ಹತ್ತೆ ಹೆಚ್ಚಾಗಿದ್ದು  ಇದೊಂದು ಪ್ರಕರಣದಲ್ಲಿ ರೆಡ್ ಹ್ಯಾಂಡ್ ಆಗಿ ಅಧಿಕಾರಗಳ ಕೈಗೆ ಹೆಣ್ಣು ಬ್ರೂಣ ಹತ್ಯೆ ಮಾಡುವಾಗಲೇ ಸಿಕ್ಕಿಬಿದ್ದಿದ್ದಾರೆ.

ದುರಂತವೆಂದರೆ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದರು ಕೂಡ ಆ ಮಗುವನ್ನು ಉಳಿಸಲು ಆಗಲಿಲ್ಲ ಪ್ರಪಂಚವನ್ನು ನೋಡುವ ಮೊದಲೇ ಮಗು ಕಣ್ಮುಚ್ಚಿಕೊಂಡಿತ್ತು. ಆನಂದ್ ಮತ್ತು ಅಶ್ವಿನಿ ಎನ್ನುವ ದಂಪತಿಗಳಿಂದ ಹೆಣ್ಣು ಭ್ರೂಣ ಹತ್ಯೆ ಮಾಡುವ ಕೆಲಸ ನಡೆದಿತ್ತು.

ಮಂಡ್ಯದ ಪಾಂಡವಪುರದಲ್ಲಿರುವ ಹೆಲ್ತ್ ಕ್ವಾಟ್ರಸ್ ನಲ್ಲಿ ಈ ಕೆಲಸ ನಡೆದಿದ್ದು ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆಯ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಈ ದಂಪತಿಗಳು ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ದಾಳಿಯಿಂದ ಈ ಪ್ರಕರಣ ಹೊರಬಂದಿದ್ದು  ಹೆಣ್ಣು ಭ್ರೂಣ ಹತ್ಯೆಗೆ ಔಷಧಿಯನ್ನು ನೀಡಿದ ಆನಂದ್ ಮತ್ತು ಅಶ್ವಿನಿ ದಂಪತಿಗಳು ಮೈಸೂರು ಮೂಲದ ಪುಷ್ಪವತಿಗೆ ಔಷಧಿ ನೀಡಲಾಗಿತ್ತು.

ಈಗಾಗಲೇ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಪುಷ್ಪವತಿ ಮೂರನೇ ಮಗು ಹೆಣ್ಣು ಎಂದು ಗೊತ್ತಾದಾಗ ಅದನ್ನು ಕೂಡ ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಈ ದಂಪತಿಗಳ ಹತ್ತಿರ ಬಂದಿದ್ದಳು ನಿನ್ನೆ ತಡರಾತ್ರಿ ಆರೋಗ್ಯ ಇಲಾಖೆಯ ಕ್ವಾಟ್ರಸ್ ನಲ್ಲಿ ಇದಕ್ಕೆ ಪೂರ್ವ ತಯಾರಿಯನ್ನು ಮಾಡಿಕೊಳ್ಳಲಾಗಿತ್ತು.

ಅಧಿಕಾರಿಗಳು ದಾಳಿ ನಡೆಸುವ ಅಷ್ಟರಲ್ಲಿ ಗರ್ಭಪಾತದ ಔಷಧಿ ನೀಡಲಾಗಿತ್ತು ವೈದ್ಯರು ಎಷ್ಟೇ ಪ್ರಯತ್ನ ಪಟ್ಟರು ಮಗುವನ್ನು ಉಳಿಸಲಾಗಲಿಲ್ಲ ಆನಂದ್ ಮತ್ತು ಅಶ್ವಿನಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ಸಮಗ್ರ ತನಿಖೆಯಿಂದ ಈ ದಂಪತಿಗಳಿಂದ ಇನ್ನೆಷ್ಟು ಕಂದಮ್ಮಗಳು ಬಲಿಯಾಗಿವೆ ಅನ್ನೋದು ಹೊರಬರಬೇಕಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...