Sunday, June 15, 2025
Google search engine
Homeಮಂಡ್ಯಹನುಮಧ್ವಜ ಸ್ಥಂಭ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಹನುಮಧ್ವಜ ಸ್ಥಂಭ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಮಂಡ್ಯ : ಕೆರಗೋಡು ಹನುಮಧ್ವಜ ಸ್ಥಂಭ  ಪ್ರಕರಣ ಇದೀಗ ಬೇರೆ ತಿರುವು ಪಡೆದುಕೊಂಡಿದ್ದು   ಹನುಮಧ್ವಜ ಸ್ಥಂಭ ಹೋರಾಟಗಾರರ ವಿರುದ್ದ ರೌಡಿ ಶೀಟರ್  ಅಸ್ತ್ರವನ್ನು ಸರ್ಕಾರ ಪ್ರಯೋಗಿಸಲು ಮುಂದಾಗಿದ್ದು ಹನುಮಧ್ವಜ ಸ್ಥಂಭಕ್ಕಾಗಿ ಹೋರಾಟ ನಡೆಸಿದ್ದ ಮೂವರಿಗೆ ನೋಟಿಸ್ ನೀಡಲಾಗಿದ್ದು.


ಮಂಡ್ಯದ ಕೆರಗೋಡು ಪೊಲೀಸರಿಂದ ರೌಡಿ ಶೀಟರ್ ತೆರೆಯುವ ನೋಟಿಸ್ ಜಾರಿ‌ ಮಾಡಲಾಗಿದೆ.
ಬಾಲಕೃಷ್ಣ @ ಚಿಕ್ಕಬಳ್ಳಿ ಬಾಲು, ಕಾರ್ತಿಕ್ ಮತ್ತು ಹರೀಶ್ ಗೆ ನೋಟೀಸ್‌ ನೀಡಲಾಗಿದೆ.


ಕೆರಗೋಡು ಹನುಮಧ್ವಜ ಸ್ಥಂಭಕ್ಕಾಗಿ ಹೋರಾಟ ನಡೆಸಿದ್ದ ಈ ಮೂವರು ಬಾರಿ ಹೋರಾಟ ನಡೆಸಿದ್ದರು.
ದೇಶಾಧ್ಯಂತ ಬಾರೀ ಸಂಚಲನ ಉಂಟುಮಾಡಿದ್ದ ಪ್ರಕರಣ ಇದಾಗಿತ್ತು.


ಹನುಮಧ್ವಜ  ಹೋರಾಟದ ಸಂದರ್ಭ ಐಪಿಸಿ ಸೆಕ್ಷನ್ 143, 341,353,149 ರ ಅಡಿಯಲ್ಲಿ ಇವರ ವಿರುದ್ದ ಪ್ರಕರಣ ದಾಖಲು ಮಾಡಲಾಗಿತ್ತು.


ಹನುಮಧ್ವಜ ಹೋರಾಟದ ಸಂದರ್ಭ ಅನ್ಯಕೋಮಿನವರನ್ನ ಹೆದರಿಸುವುದು, ಬೆದರಿಸುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಕೊಟ್ಟು ನೋಟಿಸ್ ಜಾರಿಗೊಳಿಸಿ 7 ದಿನಗಳ ಒಳಗೆ ಕೆರಗೋಡು ಪೊಲೀಸ್ ಠಾಣೆಗೆ ಹಾಜರಾಗಿ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.


ನೋಟಿಸ್ ತಲುಪಿದ ನಂತರ ಹನುಮಧ್ವಜ ಹೋರಾಟಗಾರರ ಆಕ್ರೋಶ ಹೊರಹಾಕಿದ್ದು
ಹಿಂದು ಕಾರ್ಯಕರ್ತರನ್ನ ಹತ್ತಿಕ್ಕಲಾಗ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!