Sunday, June 15, 2025
Google search engine
Homeಶಿವಮೊಗ್ಗಘಟನೆ ನಡೆದು 24 ಗಂಟೆ ಒಳಗೆ ಪ್ರಮುಖ ಆರೋಪಿಯನ್ನು ಬಂಧಿಸಿ ಜೈಲಿಗೆ ಶಿಫ್ಟ್ ಮಾಡಿದ‌ ಶಿವಮೊಗ್ಗ...

ಘಟನೆ ನಡೆದು 24 ಗಂಟೆ ಒಳಗೆ ಪ್ರಮುಖ ಆರೋಪಿಯನ್ನು ಬಂಧಿಸಿ ಜೈಲಿಗೆ ಶಿಫ್ಟ್ ಮಾಡಿದ‌ ಶಿವಮೊಗ್ಗ ಪೊಲೀಸ್..!

ಪ್ರಕರಣದ ಪ್ರಮುಖ ಆರೋಪಿ ಆದಿಲ್ ಬಂಧನ

ಶಿವಮೊಗ್ಗ: ಲಷ್ಕರ್ ಮೌಲದಲ್ಲಿ ನಿನ್ನೆ ನಡೆದ ಭೀಕರ ಗ್ಯಾಂಗ್ ವಾರ್ ನಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಾಸಿನ್ ಖುರೇಶಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಯಾಸಿನ್ ಖುರೇಶಿ  ಕಡೆಯವರು ಈತನ ಮೇಲೆ ದಾಳಿಗೆ ಬಂದಿದ್ದ ಇಬ್ಬರನ್ನು ಮಾರಕಾಸ್ತ್ರಗಳಿಂದ ತಳಿಸಿ ಬೈಕ್ ಮೇಲೆ ಕಲ್ಲು ಎತ್ತು ಹಾಕಿದ್ದರು.

ಸೇಬು ಮತ್ತು ಗೌಸ್ ಎನ್ನುವ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಇದರ ಬೆನ್ನಲ್ಲೇ ಇಂದು ಸಂಜೆ ಯಾಸಿನ್ ಕೂಡ ಸಾವನ್ನಪ್ಪಿದ್ದಾನೆ .

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಪಿ ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಅಲರ್ಟ್ ಆದ ಪೊಲೀಸರು ಯಾಸಿನ್ ಕಡೆಯ 10ಹಾಗೂ ಆದಿಲ್ ಗುಂಪಿನ 8 ಜನರನ್ನು ವಶಪಡಿಸಿಕೊಂಡಿದ್ದಾರೆ.

ಅವರ ಮೇಲೆ 302 ಹಾಗೂ 307 ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ  ಕೆ ಆರ್ ಪುರಂ ನ ನಿವಾಸಿ ಪಾತಕಿ ಆದಿಲ್ ಹಾಗೂ ಆತನ ಸಹಚರ ಒಬ್ಬನನ್ನು ವಶಕ್ಕೆ ಪಡೆದ ಪೊಲೀಸರು ಜೈಲಿಗೆ ಕಳಿಸಿದ್ದಾರೆ.

ಒಟ್ಟಿಗೆ ಇಲ್ಲಿಯವರೆಗೂ 18 ಜನರನ್ನು ಬಂಧಿಸಿದ್ದಾರೆ ಇನ್ನಷ್ಟು ಜನರ ಹುಡುಕಾಟದಲ್ಲಿ ಪೊಲೀಸರು ಇದ್ದಾರೆ.

ಘಟನೆ ನಡೆದ 24 ಗಂಟೆ ಒಳಗೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿ ಆದಿಲ್ ಮತ್ತು ಆತನ ಸಹಚರರನ್ನು ಹಾಗೂ ಆದಿಲ್ ಗುಂಪಿನ ಮೇಲೆ ಹಲ್ಲೆ ಮಾಡಿ ಇಬ್ಬರನ್ನು ಕೊಲೆ ಮಾಡಿದ ಪಾತಕಿಗಳನ್ನು ಬಂಧಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!