Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞ ಎಟಿ ಅನಂತಕೃಷ್ಣ ಇನ್ನಿಲ್ಲ..!

ಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞ ಎಟಿ ಅನಂತಕೃಷ್ಣ ಇನ್ನಿಲ್ಲ..!

ಎಟಿ ಅನಂತಕೃಷ್ಣ


ಶಿವಮೊಗ್ಗದ ಜನಪ್ರಿಯ ತಾಂತ್ರಿಕ ತಜ್ಞರಾಗಿದ್ದ  ಎ. ಟಿ. ಅನಂತಕೃಷ್ಣ ಅವರು ನಿನ್ನೆ ರಾತ್ರಿ ೧೧ ರ ಸುಮಾರಿಗೆ ಎಲ್ಲರನ್ನೂ ಅಗಲಿ ಹೋಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಹೊಸಮನೆಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.


ಮಧ್ಯಾಹ್ನ ೩ ಗಂಟೆಗೆ ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಸೌಮ್ಯ ಸ್ವಭಾವದವರಾದ ಅನಂತ್ ಕೃಷ್ಣ ಅವರು ಶಿವಮೊಗ್ಗ ಜಿಲ್ಲೆಯಾದ್ಯಂತ ಹಲವು ಕಡೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದರು ಆದಿಚುಂಚನಗಿರಿ ಸಮುದಾಯ ಭವನ ಸೇರಿದಂತೆ ಒಕ್ಕಲಿಗರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ‌ ಕಟ್ಟಡ ಸೇರಿದಂತೆ ಆನೇಕ ಕಟ್ಟಡಗಳ ನಿರ್ಮಾಣಕ್ಕೆ ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ ಉಚಿತವಾಗಿ ಕಾರ್ಯನಿರ್ವಹಿಸಿದ ಸೇವೆ ಇವರದು.

ಅಪಾರ ಬಂಧುಗಳನ್ನು ಸ್ನೇಹಿತರನ್ನು, ಹಿತೈಷಿಗಳನ್ನು, ಅಗಲಿರುವ ಶ್ರೀಯುತರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಾಜಿ ಉಪ ಮುಖ್ಯ ಮಂತ್ರಿಗಳಾದ  ಕೆ. ಎಸ್. ಈಶ್ವರಪ್ಪ ನವರು, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಆದಿಮೂರ್ತಿ ಹಾಗೂ ಪದಾಧಿಕಾರಿಗಳು ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಡಾ. ಶಿವರಾಮಕೃಷ್ಣ, ಮಾನಸ, ಮಲೆನಾಡು ಕ್ರೆಡಿಟ್ ಕೋ. ಸೊಸೈಟಿಯ ಅಧ್ಯಕ್ಷರಾದ ಕೆ. ಎನ್. ರಾಮಕೃಷ್ಣ, ಅಶಿತ್, ಭೈರಾಪುರ ಶಿವಪ್ಪಗೌಡ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ವ್ಯವಸ್ಥಾಪಕರು, ಶಿಕ್ಷಣ ಟ್ರಸ್ಟ್ ಪದಾಧಿಕಾರಿಗಳು, ಸಿಬ್ಬಂದಿ, ಸೇರಿದಂತೆ ನಗರದ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...