Tuesday, April 29, 2025
Google search engine
Homeಅಂತಾರಾಷ್ಟ್ರೀಯಜೆಸಿಐ ಶಿವಮೊಗ್ಗ "ಅನವರತ-24" "ನೊಬೆಲ್ ವರ್ಲ್ಡ್ ರೆಕಾರ್ಡ್" , "ಲಿಮ್ಕಾ ಬುಕ್ ಆಫ್ ರೆಕಾರ್ಡ್" ಕಾರ್ಯಕ್ರಮ...

ಜೆಸಿಐ ಶಿವಮೊಗ್ಗ “ಅನವರತ-24” “ನೊಬೆಲ್ ವರ್ಲ್ಡ್ ರೆಕಾರ್ಡ್” , “ಲಿಮ್ಕಾ ಬುಕ್ ಆಫ್ ರೆಕಾರ್ಡ್” ಕಾರ್ಯಕ್ರಮ ..!

ವಿನೂತನ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿರುವ ಜೆಸಿಐ ಶಿವಮೊಗ್ಗ ರಾಯಲ್ಸ್ ನೇತೃತ್ವದಲ್ಲಿ ಶಿವಮೊಗ್ಗದ ಎಲ್ಲಾ ಜೆಸಿಐ ಸಂಸ್ಥೆಗಳ ಸಹಯೋಗದೊಂದಿಗೆ ಮೇ 23ರ ಮಧ್ಯರಾತ್ರಿ 12 ಗಂಟೆಯಿಂದ ಮೇ 24ರ ಮಧ್ಯರಾತ್ರಿ 12 ಗಂಟೆಯವರೆಗೆ “ಅನವರತ-24” ಎಂಬ ಶೀರ್ಷಿಕೆ ಅಡಿಯಲ್ಲಿ ವಿಶ್ವ ದಾಖಲೆಯ 24 ಗಂಟೆಗಳ ನಿರಂತರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ .

ಜೆಸಿಐನ ನೇತೃತ್ವ ವಹಿಸಿರುವ ಸುದರ್ಶನ್ ತಾಯಿಮನೆ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ತರಬೇತಿ ವಿಶೇಷತೆ ಎಂದರೆ 24 ತರಬೇತುದಾರರು 24 ವಿವಿಧ ವಿಷಯಗಳನ್ನು ಒಳಗೊಂಡ 24ಕ್ಕೂ ಹೆಚ್ಚು ಶಿಬಿರಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಇದು ನಿರಂತರವಾಗಿ ನಡೆಯುವ ಕಾರ್ಯಕ್ರಮ ಎಂದು ಹೇಳಿದರು.


ತರಬೇತುದಾರರಾದ ಜೆಎಫ್‍ಎಮ್ ಮೋಹನ್ ಕಲ್ಪತರು ಅವರು ಈ ತರಬೇತಿಯನ್ನು ಪ್ರತಿ ವರ್ಷ ಜೆಸಿಐ ಭಾರತದಿಂದ ಆಚರಿಸುವ ರಾಷ್ಟ್ರೀಯ ತರಬೇತಿ ದಿನದ ಪ್ರಯುಕ್ತ ಅನೇಕ ಸಂಸ್ಥೆಗಳ ಸಹಕಾರದಿಂದ ನಡೆಸಲಾಗುತ್ತಿದೆ, ಇದು “ನೊಬೆಲ್ ವರ್ಲ್ಡ್ ರೆಕಾರ್ಡ್” , “ಲಿಮ್ಕಾ ಬುಕ್ ಆಫ್ ರೆಕಾರ್ಡ್” ಅನ್ನು ಸೇರಲಿದೆ.

ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತಿ ಇರುತ್ತಾರೆ ಎಂದು ತಿಳಿಸಿದರು.
ಮತ್ತೊಬ್ಬ ತರಬೇತುದಾರರಾದ ಜೆಸಿ ಪ್ರಮೋದ್ ಶಾಸ್ತ್ರಿ ರವರು ಮಾತನಾಡಿ ಎಲ್ಲಾ 24 ವಿಷಯಗಳ ತರಬೇತಿಯನ್ನು ವಿವಿಧ ವರ್ಗದ ಶಿಬಿರಾರ್ಥಿಗಳಿಗೆ ಉಪಯೋಗವಾಗುವಂತೆ ಸಿದ್ಧಪಡಿಸಲಾಗಿದ್ದು. ಕ್ರಿಯಾತ್ಮಕ ಶೈಲಿಯಲ್ಲಿ ಜೆಸಿಐ ಭಾರತದಿಂದ ಪ್ರಮಾಣಿಕೃತಗೊಂಡ ರಾಷ್ಟ್ರೀಯ ಮತ್ತು ವಲಯ ತರಬೇತುದಾರರಿಂದ ನಡೆಯಲಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸ್ಮಿತಾ ಮೋಹನ್, ದಿವ್ಯ ಪ್ರವೀಣ್, ಮಧು, ನವೀನ್ ತಲಾರಿ ಉಪಸ್ಥಿತರಿದ್ದರು.

ರಘುರಾಜ್ ಹೆಚ್‌.ಕೆ 9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...