Wednesday, April 30, 2025
Google search engine
Homeಶಿವಮೊಗ್ಗಈಶ್ವರಪ್ಪ ಗೆ ಒಂದು ನ್ಯಾಯ ನಾಗೇಂದ್ರಗೆ ಒಂದು ನ್ಯಾಯ ಇದು ಸರಿನಾ..?ಕೋಟ ಶ್ರೀನಿವಾಸ್ ಪೂಜಾರಿ..!

ಈಶ್ವರಪ್ಪ ಗೆ ಒಂದು ನ್ಯಾಯ ನಾಗೇಂದ್ರಗೆ ಒಂದು ನ್ಯಾಯ ಇದು ಸರಿನಾ..?ಕೋಟ ಶ್ರೀನಿವಾಸ್ ಪೂಜಾರಿ..!

ಶಿವಮೊಗ್ಗ : ನಗರದಲ್ಲಿ ಬಿಜೆಪಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡ  ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ವಿನೂಬನಗರದ ನಿವಾಸಕ್ಕೆ ಇಂದು ಭೇಟಿ ನೀಡಿದ್ದರು.

ಪ್ರಮಾಣಿಕ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯಿಂದ ಅವರ ಕುಟುಂಬಕ್ಕೆ ನಷ್ಟವಾಗಿದೆ

ಈ ಹಗರಣವನ್ನು ನನ್ನ ತಲೆಗೆ ಕಟ್ಟುತ್ತಿದ್ದಾರೆ ಎಂದು ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಇಬ್ಬರು ಪುತ್ರರೊಂದಿಗೆ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಚಂದ್ರಶೇಖರನ್ ಪತ್ನಿ ಕವಿತಾ ಹೇಳುವುದು ಕೇಳಿ ದುಃಖವಾಗುತ್ತದೆ.

ಪರಿಶಿಷ್ಟ ಪಂಗಡಗಳ ಇಲಾಖೆಯ ಸಚಿವ ನಾಗೇಂದ್ರನನ್ನು ಸಂಪುಟದಿಂದ ವಜಗೊಳಿಸಬೇಕು.

ರಾಜಾರೋಷವಾಗಿ ಪರಿಶಿಷ್ಟ ಪಂಗಡದ ನಿಗಮದ 87 ಕೋಟಿ ಹಣವನ್ನು ಲೂಟಿ ಮಾಡಲಾಗಿದೆ.

ಸಚಿವ ನಾಗೇಂದ್ರನನ್ನು ವಜಗೊಳಿಸದಿದ್ದರೆ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ದೋಷಿ ಆಗುತ್ತೀರಾ..?;ಈ ಹಗರಣದ ತನಿಖೆಯನ್ನು ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ಕಡೆಯಿಂದ ನ್ಯಾಯಾಂಗ ತನಿಖೆ ನಡೆಸಬೇಕು.

ಈ ಪ್ರಕರಣವನ್ನು ಸಿಬಿಐ ತನಿಖೆಗೂ ವಹಿಸಿ ತಕ್ಷಣವೇ 25 ಲಕ್ಷ ರೂ ಪರಿಹಾರ ನೀಡಬೇಕು ಸರ್ಕಾರದ ಅಧೀನದಲ್ಲಿರುವ ಸಿಓಡಿ ತನಿಖೆಯಿಂದ ಈ ಪ್ರಕರಣಕ್ಕೆ ನ್ಯಾಯ ಸಿಗುವುದಿಲ್ಲಸರ್ಕಾರ ಈ ಪ್ರಕರಣವನ್ನು ಮುಚ್ಚಿ ಹಾಕಲು ಹೊರಟಿದೆ ಎಂಬ ಅನುಮಾನ ಉಂಟಾಗಿದೆ ಈ ಪ್ರಕರಣದ ಆರೋಪಿಗಳನ್ನು ಇದುವರೆಗೂ ಕೂಡ ಬಂಧಿಸಿಲ್ಲ.

ಈಶ್ವರಪ್ಪನವರ ಪ್ರಕರಣದಲ್ಲಿ ಯಾರು ಡೆತ್ ನೋಟ್ ಬರೆದಿದ್ದಕ್ಕೆ ರಾಜೀನಾಮೆ ಕೇಳಿರಲಿಲ್ಲವಾ..?!

ಈಶ್ವರಪ್ಪನವರ ಪ್ರಕರಣಕ್ಕೆ ಒಂದು ನ್ಯಾಯ? ನಾಗೇಂದ್ರ ಪ್ರಕರಣಕ್ಕೆ ಒಂದು ನ್ಯಾಯನಾ? ಎಂದು ಪ್ರಶ್ನಿಸಿದ ಕೋಟ ಶ್ರೀನಿವಾಸ ಪೂಜಾರಿ ನೂಂದ ಕುಟುಂಬಕ್ಕೆ ನ್ಯಾಯ ಸಿಗದೇ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗದು ಎಂದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...