Home ಸಾಗರಪ್ರತಿಷ್ಠಿತ ಸಿಎನ್‌ಆರ್ ರಾವ್ ಅತೀ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರಕಟ; ರೋಹಿತ್ ವಿ. ಆಯ್ಕೆ..!

ಪ್ರತಿಷ್ಠಿತ ಸಿಎನ್‌ಆರ್ ರಾವ್ ಅತೀ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರಕಟ; ರೋಹಿತ್ ವಿ. ಆಯ್ಕೆ..!

by EDITOR NEWS WARRIORS
0 comments

ಸಾಗರ: ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ವತಂತ್ರ ಪಿಯು ಕಾಲೇಜಿನ ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಗರದ ರೋಹಿತ್ ವಿ. ೨೦೨೩ನೇ ಸಾಲಿನ ರಾಷ್ಟ್ರಮಟ್ಟದ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಕಳೆದ ೧೪ ವರ್ಷಗಳಿಂದ ಭೌತಶಾಸ್ತ್ರ ಉಪನ್ಯಾಸಕರಾಗಿ ಹಾಗೂ ಹೊಂಗಿರಣ ಸಂಸ್ಥೆಯ ಅಟಲ್ ಟಿಂಕರಿಂಗ್ ಲ್ಯಾಬ್ ಸಂಯೋಜಕರಾಗಿ ರೊಬೊಟಿಕ್ಸ್ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿರುವ ರೋಹಿತ್‌ರ ನಿರಂತರ ವೈಜ್ಞಾನಿಕ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವೈಜ್ಞಾನಿಕ ಶಿಕ್ಷಣದ ಸಂಪನ್ಮೂಲ ವ್ಯಕ್ತಿಯಾಗಿ, ಹಲವು ಪತ್ರಿಕೆಗಳಿಗೆ ವೈಜ್ಞಾನಿಕ ಅಂಕಣ ಬರಹಗಾರರಾಗಿ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವೈಜ್ಞಾನಿಕ ಶಿಕ್ಷಣದ ಹಲವಾರು ಕಾರ್ಯಕ್ರಮಗಳನ್ನು ರೋಹಿತ್ ನಡೆಸುತ್ತಿದ್ದಾರೆ.


ವಿಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯವಾಗಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನ ಉಪನ್ಯಾಸಕರನ್ನು ಗುರುತಿಸುವ ಸಲುವಾಗಿ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (ಜೆಎನ್‌ಸಿಎಎಸ್‌ಆರ್) ಪ್ರತಿ ವರ್ಷ ರಾಷ್ಟ್ರಮಟ್ಟದಲ್ಲಿ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿದೆ.

ಇವರ ಈ ವಿಶಿಷ್ಟ ಸಾಧನೆಗೆ ಕಾಲೇಜಿನ ಶಿಕ್ಷಕ ವೃಂದ ಪೋಷಕರು ವಿದ್ಯಾರ್ಥಿಗಳು ಸ್ನೇಹಿತರು ಬಂಧುಗಳು ಹಿತೈಷಿಗಳು ಅಭಿನಂದಿಸಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...