Tuesday, April 29, 2025
Google search engine
Homeಸಾಗರಪ್ರತಿಷ್ಠಿತ ಸಿಎನ್‌ಆರ್ ರಾವ್ ಅತೀ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರಕಟ; ರೋಹಿತ್ ವಿ. ಆಯ್ಕೆ..!

ಪ್ರತಿಷ್ಠಿತ ಸಿಎನ್‌ಆರ್ ರಾವ್ ಅತೀ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿ ಪ್ರಕಟ; ರೋಹಿತ್ ವಿ. ಆಯ್ಕೆ..!

ಸಾಗರ: ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ವತಂತ್ರ ಪಿಯು ಕಾಲೇಜಿನ ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಗರದ ರೋಹಿತ್ ವಿ. ೨೦೨೩ನೇ ಸಾಲಿನ ರಾಷ್ಟ್ರಮಟ್ಟದ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಕಳೆದ ೧೪ ವರ್ಷಗಳಿಂದ ಭೌತಶಾಸ್ತ್ರ ಉಪನ್ಯಾಸಕರಾಗಿ ಹಾಗೂ ಹೊಂಗಿರಣ ಸಂಸ್ಥೆಯ ಅಟಲ್ ಟಿಂಕರಿಂಗ್ ಲ್ಯಾಬ್ ಸಂಯೋಜಕರಾಗಿ ರೊಬೊಟಿಕ್ಸ್ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿರುವ ರೋಹಿತ್‌ರ ನಿರಂತರ ವೈಜ್ಞಾನಿಕ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವೈಜ್ಞಾನಿಕ ಶಿಕ್ಷಣದ ಸಂಪನ್ಮೂಲ ವ್ಯಕ್ತಿಯಾಗಿ, ಹಲವು ಪತ್ರಿಕೆಗಳಿಗೆ ವೈಜ್ಞಾನಿಕ ಅಂಕಣ ಬರಹಗಾರರಾಗಿ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವೈಜ್ಞಾನಿಕ ಶಿಕ್ಷಣದ ಹಲವಾರು ಕಾರ್ಯಕ್ರಮಗಳನ್ನು ರೋಹಿತ್ ನಡೆಸುತ್ತಿದ್ದಾರೆ.


ವಿಜ್ಞಾನ ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯವಾಗಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನ ಉಪನ್ಯಾಸಕರನ್ನು ಗುರುತಿಸುವ ಸಲುವಾಗಿ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (ಜೆಎನ್‌ಸಿಎಎಸ್‌ಆರ್) ಪ್ರತಿ ವರ್ಷ ರಾಷ್ಟ್ರಮಟ್ಟದಲ್ಲಿ ಸಿಎನ್‌ಆರ್ ರಾವ್ ಅತಿ ವಿಶಿಷ್ಟ ವಿಜ್ಞಾನ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿದೆ.

ಇವರ ಈ ವಿಶಿಷ್ಟ ಸಾಧನೆಗೆ ಕಾಲೇಜಿನ ಶಿಕ್ಷಕ ವೃಂದ ಪೋಷಕರು ವಿದ್ಯಾರ್ಥಿಗಳು ಸ್ನೇಹಿತರು ಬಂಧುಗಳು ಹಿತೈಷಿಗಳು ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...