
ತೀರ್ಥಹಳ್ಳಿ : ತಾಲೂಕಿನ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬುವವನು ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಪೊಲೀಸರು ನಿನ್ನೆ ಮಧ್ಯಾಹ್ನ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಾದ
ಮಿಥುನ್ ಕುಮಾರ್ ಜಿ ಕೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಅನಿಲ್ ಕುಮಾರ್ ಭೂಮಾರೆಡ್ಡಿ
ಹಾಗೂ ಕಾರಿಯಪ್ಪ ಎಜಿ ಅವರ ಮಾರ್ಗದರ್ಶನದಲ್ಲಿ
ಗಜಾನನ್ ವಾಮನ್ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದ
ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000/- ರೂಗಳ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆ
ಗುನ್ನೆ ಸಂಖ್ಯೆಃ 0148/2024 ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈ
ಗೊಂಡಿರುತ್ತಾರೆ.